ಉಡುಪಿ: ಉಡುಪಿ ಜಿಲ್ಲೆಯಿಂದ ಮಹಾ ಕುಂಭಮೇಳಕ್ಕೆ ಪ್ರಯಾಗ್ ರಾಜ್ ಗೆ ತೆರಳುವವರಿಗೆ ಆಯೋಜಿಸಲಾದ “ಉಡುಪಿ – ಪ್ರಯಾಗ್ ರಾಜ್” ವಿಶೇಷ ರೈಲಿಗೆ ಇಂದು ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಆಶೀರ್ವಚಿಸಿ, ನಿಶಾನೆ ತೋರಿ ಚಾಲನೆ ನೀಡಿದರು.
ಮಹಾ ಕುಂಭಮೇಳಕ್ಕೆ ತೆರಳುತ್ತಿರುವ ಕಾಪು ವಿಧಾನಸಭಾ ಕ್ಷೇತ್ರದ ಸುಮಾರು 170 ಜನರಿಗೆ ಕಾಪು ಶಾಸಕರು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಮತ್ತಿತರರು ಉಪಸ್ಥಿತರಿದ್ದರು.














