ಉಡುಪಿ: ಟೀಮ್ ನೆಷನ್ ಫಸ್ಟ್(ರಿ) ವತಿಯಿಂದ ರಕ್ತದಾನ ಶಿಬಿರ.

ಉಡುಪಿ: ಟೀಮ್ ನೆಷನ್ ಫಸ್ಟ್(ರಿ) ಇದರ ವತಿಯಿಂದ ಆಯೋಜಿಸಲಾಗಿದ್ದ ರಕ್ತದಾನ ಶಿಬಿರವು ಅಜ್ಜರಕಾಡಿನ ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಯಶಸ್ವಿಯಾಗಿ ಆಗಸ್ಟ 3ರಂದು ನಡೆಯಿತು.

ಉಡುಪಿಯ ಶಾಸಕರಾದ ಯಶಪಾಲ್ ಎ ಸುವರ್ಣ ರವರು ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.

ಟೀಮ್ ನೇಷನ್ ಫಸ್ಟ್ ನ ಅಧ್ಯಕ್ಷರಾದ ಸೂರಜ್ ಕಿದಿಯೂರ್ ಮಾತನಾಡಿ ರಕ್ತದಾನ ಮಹಾದಾನ, ಚಿಕಿತ್ಸೆಯ ಮೂಲಕ ವೈದ್ಯರು ರೋಗಿಯನ್ನು ಗುಣಪಡಿಸಬಹುದು ಆದರೆ ಒಬ್ಬ ಸಾಮಾನ್ಯ ಮನುಷ್ಯ ರಕ್ತದಾನದ ಮೂಲಕ ಒಬ್ಬರ ಜೀವವನ್ನು ಉಳಿಸಬಹುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ನಮ್ಮ ತಂಡದ ತರಬೇತಿ ಶಿಬಿರದಲ್ಲಿ ತರಬೇತಿ ಪಡೆದುಕೊಂಡು ಅಗ್ನಿವೀರ್ ಸ್ಕೀಮ್ ನ ಮೂಲಕ ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ ಶಮಂತ್ ಕೆ ಸುಳ್ಯ ಇವರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು. ಡಾ. ರಾಜೇಂದ್ರ ಕೆ ಅಸೋಸಿಯೇಟ್ ಪ್ರೊಫೆಸರ್ ಹಾಗೂ ಡಾ. ರಾಮಚಂದ್ರ ಪಾಟ್ಕರ್ ದೈಹಿಕಶಿಕ್ಷಣ ನಿರ್ದೇಶಕರು ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಉಡುಪಿ , ತಂಡದ ಉಪಾಧ್ಯಕ್ಷರಾದ ಡಾ. ಅತುಲ್ ಹಾಗೂ ಕೆಎಂಸಿಯ ಡಾ. ದೀಪ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ತಂಡದ ಕಾರ್ಯದರ್ಶಿ ಸಾತ್ವಿಕ್ ಗಡಿಯಾರ್, ಸದಸ್ಯರಾದ ಸಂತೋಷ್ ಕರ್ಕೇರ , ಪೂಜಾ ಸೂರಜ್ ಉಪಸ್ಥಿತರಿದ್ದರು.