ಉಡುಪಿ: ಬಸ್ಸುಗಳು ನಿಗಧಿತ ಮಾರ್ಗದಲ್ಲಿ ಸಂಚರಿಸಲು ಸೂಚನೆ

ಉಡುಪಿ, ಮೇ 15: ಸಂತೆಕಟ್ಟೆಯಿಂದ ಉಡುಪಿ ಕಡೆಗೆ ಬರುವ ಕೆಲವೊಂದು ಬಸ್ಸಿನ ಪರವಾನಿಗೆಯಲ್ಲಿ ನಿಟ್ಟೂರು–ರಾ.ಹೆ.17 ಎಂದು ನಮೂದಿಸಿರುವ ಬಸ್ಸುಗಳು ಅಂಬಾಗಿಲು ರಾ.ಹೆ.66 ಕರಾವಳಿ ಬೈಪಾಸಿನಿಂದ ಅಂಬಲಪಾಡಿ ಬೈಪಾಸ್- ಬ್ರಹ್ಮಗಿರಿ-ಅಜ್ಜರಕಾಡು-ತಾಲೂಕು ಕಛೇರಿ ಮೂಲಕ ಹಾಗೂ ಉಳಿದ ಸಿಟಿ ಬಸ್ಸುಗಳು ಅಂಬಾಗಿಲು ತಾಂಗದಗಡಿ-ಗುಂಡಿಬೈಲು ಮೂಲಕ ಕಲ್ಸಂಕ ಬಂದು ಬೃಂದಾವನ ಹೋಟೆಲ್ ಬಳಿ ಎಡಕ್ಕೆ ತಿರುಗಿ ಕಾಫಿಯ ಹೋಟೆಲ್ ಬಳಿ ಬಲಕ್ಕೆ ತಿರುಗಿ ಸಿಟಿ ಬಸ್ಸು ನಿಲ್ದಾಣಕ್ಕೆ ತಲುಪುವಂತೆ ಹಾಗೂ ಬಾರ್ಕೂರು-ಬ್ರಹ್ಮಾವರ-ಹೊನ್ನಾಳ-ಹೆಬ್ರಿ-ಪೆರ್ಡೂರು-ಕುಕ್ಕೆಹಳ್ಳಿ ಹಾಗೂ ಇತರೆ ಕಡೆಯಿಂದ ಬರುವ ಷಟಲ್ ಸರ್ವೀಸ್ ಬಸ್ಸುಗಳು ಅಂಬಾಗಿಲು ಗುಂಡಿಬೈಲು ಮೂಲಕ ಕಲ್ಸಂಕ ಬಂದು ಉಡುಪಿ ಬಸ್ಸು ನಿಲ್ದಾಣಕ್ಕೆ ಪ್ರವೇಶಿಸುವಂತೆ ಜಿಲ್ಲಾ ದಂಡಾಧಿಕಾರಿಯವರು ಈಗಾಗಲೇ ಅಧಿಸೂಚನೆ ಹೊರಡಿಸಿದ್ದರೂ ಸಹ ಅಂಬಾಗಿಲು- ಕಲ್ಸಂಕ ಮಾರ್ಗದಲ್ಲಿ ಬಸ್ಸುಗಳ ಸಂಚರಿಸದಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿಬಂದಿರುತ್ತವೆ.

ಮೇಲೆ ತಿಳಿಸಲಾದ ಎಲ್ಲಾ ಬಸ್ಸುಗಳು ಕಡ್ಡಾಯವಾಗಿ ಅಂಬಾಗಿಲು-ಗುಂಡಿಬೈಲು-ಕಲ್ಸoಕ ಮಾರ್ಗವಾಗಿ ಉಡುಪಿ ಬಸ್ಸು ನಿಲ್ದಾಣ ತಲುಪಲು ಎಲ್ಲಾ ಬಸ್ಸು ಮಾಲೀಕರು ಕ್ರಮವಹಿಸಬೇಕು. ತಪ್ಪಿದಲ್ಲಿ ಮುಂದಿನ ಕಾನೂನು ಕ್ರಮಕೈಗೊಳ್ಳಲಾಗುವುದೆಂದು ಜಿಲ್ಲಾ
ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.