ಉಡುಪಿ ಶ್ರೀಕೃಷ್ಣ ಮಠಕ್ಕೆ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಭೇಟಿ.

ಉಡುಪಿ: ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ನಂತರ ಗೋ ಶಾಲೆಗೆ ತೆರಳಿ ಗೋ ಸೇವೆ ಮಾಡಿ ಗೀತಮಂದಿರದಲ್ಲಿ ಪರ್ಯಾಯ ಉಭಯ ಶ್ರೀಪಾದರಿಂದ ಅನುಗ್ರಹ ಪ್ರಸಾದ ಸ್ವೀಕಾರ ಮಾಡಿದರು.

ಪರ್ಯಾಯ ಪುತ್ತಿಗೆ ಶ್ರೀಪಾದರು ಸಂತೋಷ ಅವರ ದೇಶ ಸೇವೆಯ ಕಾರ್ಯವನ್ನು ಮೆಚ್ಚಿ ಶ್ರೀಕೃಷ್ಣಾನುಗ್ರವನ್ನು ಪ್ರದಾನ ಮಾಡಿದರು. ಕೋಟಿ ಗೀತಾ ಲೇಖನ ಯಜ್ಞ ಅಭಿಯಾನದ ವಿವರವನ್ನು ಪಡೆದುಕೊಂಡ ಸಂತೋಷರವರು ಶ್ರೀಗಳಿಗೆ ವಿಶೇಷ ಅಭಿನಂದನೆಯನ್ನು ಸಲ್ಲಿಸಿದರು.

ಬಳಿಕ ಗೀತಾ ಮಂದಿರದಲ್ಲಿ ಭಾರತ್ ಮೇಳದ ಅಂಗವಾಗಿ ನಡೆಯುವ ವಿಶ್ವರೂಪದ ಪ್ಲಾನಿಟೋರಿಯಂ ಪ್ರದರ್ಶನದ ಉದ್ಘಾಟನೆಯನ್ನು ಬಿ ಎಲ್ ಸಂತೋಷ್ ಅವರು ನಡೆಸಿದರು. ಶ್ರೀಕೃಷ್ಣ ಮಹಿಮೆಯ ಸಂಕ್ಷಿಪ್ತ ಚಿತ್ರವನ್ನು ನೋಡಿ ಸಂತಸ ವ್ಯಕ್ತಪಡಿಸಿದರು.