ಕಾಪು: ಕಾರ್ಮಿಕರೊಬ್ಬರು ಕೆಲಸ ಮಾಡುತ್ತಿದ್ದ ವೇಳೆ ಮೂರ್ಛೆ ರೋಗ ಕಾಯಿಲೆಯಿಂದ ಕೆಳಗೆ ಬಿದ್ದು ಮೃತ್ಯು

ಕಾಪು: ಕಾರ್ಮಿಕರೊಬ್ಬರು ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದ ವೇಳೆ ಪಿಡ್ಸ್ ಕಾಯಿಲೆಯಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾಪು ಭಾರತ್ ನಗರ ಎಂಬಲ್ಲಿ ನಡೆದಿದೆ.

ಮೃತರನ್ನು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಗಣೇಶಪ್ಪ ಕನಿಕೇರ ಎಂಬವರ ಮಗ ಶಿವರಾಜ ಕನಿಕೇರ(33) ಎಂದು ಗುರುತಿಸಲಾಗಿದೆ.

ಮಲ್ಲಾರು ಗ್ರಾಮದ ಕೊಂಬಗುಡ್ಡೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಇವರು, ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದ ವೇಳೆ ಪಿಡ್ಸ್ ಕಾಯಿಲೆಯಿಂದ ಬಿದ್ದರೆನ್ನಲಾಗಿದೆ. ಇದರಿಂದ ತೀವ್ರವಾಗಿ ಗಾಯಗೊಂಡ ಅವರು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.

ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.