ಉಡುಪಿ: ಬಾಲಿವುಡ್ ಬೆಡಗಿ ಪೂಜಾ ಹೆಗ್ಡೆ ಅವರು ಉಡುಪಿಯ ಕಾಪು ಮಾರಿಗುಡಿಯ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಕುಟುಂಬದ ಜೊತೆ ಭಾಗಿಯಾಗಿ ಕಾಪು ಮಾರಿಯಮ್ಮನ ದರ್ಶನ ಪಡೆದಿದ್ದಾರೆ.
ಪೂಜಾ ಹೆಗ್ಡೆ ಮೂಲತಃ ಮಂಗಳೂರಿನವರು. ಹಾಗಾಗಿ ಆಗಾಗ ಕರಾವಳಿ ಭಾಗದ ದೇವಸ್ಥಾನಗಳಿಗೆ ಭೇಟಿ ನೀಡುತ್ತಲೇ ಇರುತ್ತಾರೆ. ಇದೀಗ ಫ್ಯಾಮಿಲಿ ಜೊತೆ ಕಾಪು ಮಾರಿಗುಡಿಗೆ ನಟಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಇನ್ನೂ ಕಾಪು ಮಾರಿಗುಡಿಗೆ ಶಿಲ್ಪಾ ಶೆಟ್ಟಿ, ಕಂಗನಾ ರಣಾವತ್, ಸೂರ್ಯಕುಮಾರ್ ಯಾದವ್ ಸೇರಿದಂತೆ ಅನೇಕರು ಭೇಟಿ ನೀಡಿದ್ದರು. ಈಗ ಪೂಜಾ ಹೆಗ್ಡೆ ಭೇಟಿ ಕೊಟ್ಟಿದ್ದಾರೆ.












