ಕಾರ್ಕಳ: ವ್ಯಕ್ತಿ ನೇಣಿಗೆ ಶರಣು.

ಕಾರ್ಕಳ: ತಾಲೂಕಿನ ಬೆಳ್ಮಣ್‌ ಗ್ರಾಮದಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪೇರಲ್ ಪಾದೆಯ ಇಮ್ಯಾನುವಲ್ ವಿಲ್ಲಾ ಎಂಬಲ್ಲಿ ನೊಯಲ್ ಮಾರ್ಟಿಸ್ (46) ವಾಸವಾಗಿದ್ದು, ಅವರು ಕಳೆದ 2 ತಿಂಗಳಿನಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಇದೇ ಕಾರಣದಿಂದ ಮನನೊಂದು ಮೇ 02 ರಿಂದ ಮೇ 24ರ ನಡುವಿನ ಅವಧಿಯಲ್ಲಿ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ನೋಯಲ್‌ ಅವರ ಅಣ್ಣ ರಾಜೇಶ್ ಮಾರ್ಟಿಸ್ ನೀಡಿದ ಮಾಹಿತಿಯಂತೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.