ಕುಂದಾಪುರ: ಯಡಮೊಗ್ಗೆ ಗ್ರಾಮದ ತಟ್ಟೆಗುಳಿ ಎಂಬಲ್ಲಿ ತೆಂಗಿನ ಮರದಿಂದ ಅಕಸ್ಮಿಕವಾಗಿ ಬಿದ್ದು ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಯಡಮೊಗ್ಗೆ ಗ್ರಾಮದ ಕುಶಲ (38) ಎಂದು ಗುರುತಿಸಲಾಗಿದೆ.
ಇವರು ನ.21ರಂದು ತಟ್ಟೆಗುಳಿ ರಾಮ ಎಂಬವರ ತೋಟದಲ್ಲಿ ತೆಂಗಿನ ಮರದಿಂದ ಕಾಯಿಯನ್ನು ಕೊಯ್ದು, ಹೆಡೆಯನ್ನು ಮುರಿಯುತ್ತಿರುವಾಗ ಆಕಸ್ಮಿಕವಾಗಿ ಕೈತಪ್ಪಿ ಕೆಳಕ್ಕೆ ಬಿದ್ದರೆನ್ನಲಾಗಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡ ಅವರು, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನ.29 ರಂದು ಬೆಳಗ್ಗೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.