ನೀಟ್ ಯುಜಿ 2024: ಆಕಾಶ್ ಉಡುಪಿ ಶಾಖೆಯ 2 ವಿದ್ಯಾರ್ಥಿಗಳು ಟಾಪ್ ಸ್ಕೋರರ್

ಉಡುಪಿ, ಜೂನ್ 05: ಪರೀಕ್ಷಾ ಪೂರ್ವಸಿದ್ಧತಾ ಸೇವೆಗಳ ಕ್ಷೇತ್ರದಲ್ಲಿ ರಾಷ್ಟ್ರದಲ್ಲೇ ಮುಂಚೂಣಿಯಲ್ಲಿರುವ ಆಕಾಶ್ ಎಜುಕೇಷನಲ್ ಸರ್ವೀಸಸ್ ಲಿಮಿಟೆಡ್ (AESL) ಸಂಸ್ಥೆಯ ಉಡುಪಿ ಶಾಖೆಯ 2 ವಿದ್ಯಾರ್ಥಿಗಳು ಪ್ರತಿಷ್ಠಿತ NEET UG 2024 ಪರೀಕ್ಷೆಯಲ್ಲಿ 705 ಹಾಗೂ ಹೆಚ್ಚಿನ ಅಂಕಗಳನ್ನು ಗಳಿಸಿ, ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಈ ಗಮನಾರ್ಹ ಸಾಧನೆಯು ಅವರ ಕಠಿಣ ಪರಿಶ್ರಮ, ಸಮರ್ಪಣೆ ಮತ್ತು AESL ಒದಗಿಸಿದ ಉತ್ಕೃಷ್ಟ-ಗುಣಮಟ್ಟದ ತರಬೇತಿಗೆ ಸಾಕ್ಷಿಯಾಗಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಇಂದು ಫಲಿತಾಂಶ ಪ್ರಕಟಿಸಿದೆ.
ಪ್ರಜ್ಞಾನ್ ಪಿ. ಶೆಟ್ಟಿ 715 ಅಂಕಗಳೊಂದಿಗೆ AIR 94 (ಅಖಿಲ ಭಾರತ ಶ್ರೇಯಾಂಕ) ಹಾಗೂ ವೈಭವಿ ಆಚಾರ್ಯ 705 ಅಂಕಗಳೊಂದಿಗೆ AIR 1,138 ಗಳಿಸಿದರು.


ವಿದ್ಯಾರ್ಥಿಗಳು ಜಾಗತಿಕವಾಗಿ ಕಠಿಣ ಪ್ರವೇಶ ಪರೀಕ್ಷೆಗಳಲ್ಲಿ ಒಂದು ಎಂದು ವ್ಯಾಪಕವಾಗಿ ಪರಿಗಣಿಸಲಾಗಿರುವ NEET ಗಾಗಿ ಪೂರ್ವಸಿದ್ಧತೆ ಮಾಡಿಕೊಳ್ಳಲು AESL ನ ತರಗತಿ ಕಾರ್ಯಕ್ರಮಗಳಿಗೆ ಪ್ರವೇಶ ಪಡೆದಿದ್ದರು. ವಿಷಯಗಳನ್ನು ಸಮರ್ಪಕವಾಗಿ ಅರ್ಥಮಾಡಿಕೊಂಡು ಶಿಸ್ತಿನ ಅಧ್ಯಯನ ವೇಳಾಪಟ್ಟಿಯನ್ನು ಪಾಲಿಸಿರುವುದು ತಮ್ಮ ಯಶಸ್ಸಿಗೆ ಕಾರಣವೆಂದು ಸಾಧಕ ವಿದ್ಯಾರ್ಥಿಗಳು ಬಣ್ಣಿಸಿದ್ದಾರೆ. “ಈ ಎರಡೂ ವಿಷಯಗಳಲ್ಲಿ ಆಕಾಶ್ ಸಂಸ್ಥೆಯು ಮಾಡಿರುವ ಸಹಾಯಕ್ಕೆ ನಾವು ಕೃತಜ್ಞರಾಗಿರುತ್ತೇವೆ. ಆದರೆ, AESL ನೀಡಿರುವ ವಿಷಯ ಮತ್ತು ತರಬೇತಿ ಅಲ್ಲದಿದ್ದರೆ ಈ ಅಲ್ಪಾವಧಿಯಲ್ಲಿ ನಾವು ವಿವಿಧ ವಿಷಯಗಳಲ್ಲಿ ಅನೇಕ ಪರಿಕಲ್ಪನೆಗಳನ್ನು ಗ್ರಹಿಸಲು ಸಾಧ್ಯವಾಗುತ್ತಿರಲಿಲ್ಲ” ಎಂದು ವಿದ್ಯಾರ್ಥಿಗಳು ಅಭಿಪ್ರಾಯಿಸಿದ್ದಾರೆ.


ವಿದ್ಯಾರ್ಥಿಗಳ ಅಸಾಧಾರಣ ಸಾಧನೆಯ ಕುರಿತು ಹೆಮ್ಮೆ ವ್ಯಕ್ತಪಡಿಸಿ ಅವರನ್ನು ಅಭಿನಂದಿಸಿರುವ ಆಕಾಶ್ ಎಜುಕೇಷನಲ್ ಸರ್ವೀಸಸ್ ಲಿಮಿಟೆಡ್ (AESL) ಸಂಸ್ಥೆಯ ಮುಖ್ಯ ಶೈಕ್ಷಣಿಕ ಮತ್ತು ವ್ಯವಹಾರ ಮುಖ್ಯಸ್ಥರಾದ ಧೀರಜ್ ಕುಮಾರ್ ಮಿಶ್ರಾ ಅವರು, “ವಿದ್ಯಾರ್ಥಿಗಳನ್ನು ಅವರ ಅನುಕರಣೀಯ ಸಾಧನೆಗಾಗಿ ನಾವು ಅಭಿನಂದಿಸುತ್ತೇವೆ. ದೇಶದೆಲ್ಲೆಡೆಯ 20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು NEET 2024 ಪರೀಕ್ಷೆಗೆ ಹಾಜರಾಗಿದ್ದಾರೆ. ಅವರ ಸಾಧನೆಯು ಅವರ ಕಠಿಣ ಪರಿಶ್ರಮ ಮತ್ತು ಸಮರ್ಪಣೆ ಮತ್ತು ಅವರ ಹೆತ್ತವರ ಬೆಂಬಲದ ಬಗ್ಗೆ ಹೇಳುತ್ತದೆ. ಈ ಹಿನ್ನೆಲೆಯಲ್ಲಿ ನಮ್ಮ ವಿದ್ಯಾರ್ಥಿಗಳ ಸಾಧನೆಯು ಅವರ ಕಠಿಣ ಪರಿಶ್ರಮ ಮತ್ತು ಸಮರ್ಪಣೆ ಮತ್ತು ಅವರ ಹೆತ್ತವರ ಬೆಂಬಲವನ್ನು ಬಣ್ಣಿಸುತ್ತದೆ. ನಮ್ಮ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಮಾಡುವ ಎಲ್ಲ ಪ್ರಯತ್ನಗಳಿಗೆ ನಾವು ಶುಭ ಹಾರೈಸುತ್ತೇವೆ” ಎಂದರು.
ಭಾರತದಲ್ಲಿ ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ವೈದ್ಯಕೀಯ (MBBS), ದಂತ ವೈದ್ಯಕೀಯ (BDS) ಮತ್ತು ಆಯುಷ್ – AYUSH (BAMS, BUMS, BHMS, ಇತ್ಯಾದಿ) ಪದವಿಗಳಿಗೆ ಪ್ರವೇಶ ಪಡೆಯಲು ಹಾಗೂ ವಿದೇಶದಲ್ಲಿ ಪ್ರಾಥಮಿಕ ವೈದ್ಯಕೀಯ ಅರ್ಹತೆಯನ್ನು ಪಡೆಯಲು ಬಯಸುವ ವಿದ್ಯಾರ್ಥಿಗಳಿಗಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪ್ರತಿ ವರ್ಷವೂ ಅರ್ಹತಾ ಪರೀಕ್ಷೆಯಾಗಿ NEET ಅನ್ನು ನಡೆಸುತ್ತದೆ.
ಮಂಗಳೂರಿನ ಸಹಾಯಕ ನಿರ್ದೇಶಕ ಶ್ಯಾಮ್ ಪ್ರಸಾದ ಎಂ., ಉಡುಪಿ ಕಛೇರಿಯ ಮುಖ್ಯಸ್ಥರಾದ ಪರಮೇಶ್ವರ ಬೀರಾ ಇದ್ದರು.