ಬೆಂಗಳೂರು – ಕಣ್ಣೂರು ಮಧ್ಯೆ ವಿಶೇಷ ಎಕ್ಸ್​ಪ್ರೆಸ್ ರೈಲು.!

ಬೆಂಗಳೂರು: ನೈಋತ್ಯ ರೈಲ್ವೆಯು ಬೇಸಿಗೆ ರಜೆಯ ಹಿನ್ನಲೆ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸುವುದಕ್ಕಾಗಿ ಕೆಲವು ವಿಶೇಷ ರೈಲುಗಳನ್ನು ಘೋಷಣೆ ಮಾಡಿದ್ದು, ಇದೀಗ ಬೆಂಗಳೂರು ಮತ್ತು ಕೇರಳದ ಕಣ್ಣೂರು ನಡುವೆ ವಿಶೇಷ ಎಕ್ಸ್​​ಪ್ರೆಸ್ ರೈಲನ್ನು ಘೋಷಣೆ ಮಾಡಿದೆ.

ರೈಲು ಸಂಖ್ಯೆ, ಸಂಚರಿಸುವ ಮಾರ್ಗ, ನಿಲುಗಡೆ ಮತ್ತು ಇತರ ವಿವರಗಳನ್ನು ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಹಂಚಿಕೊಂಡಿದ್ದು, ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು (SMVT ಬೆಂಗಳೂರು) – ಕಣ್ಣೂರು ನಡುವೆ ವಿಶೇಷ ಎಕ್ಸ್‌ಪ್ರೆಸ್ ಓಡಾಟ ನಡೆಸಲಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

ಬೆಂಗಳೂರು – ಕಣ್ಣೂರು ವಿಶೇಷ ಎಕ್ಸ್​ಪ್ರೆಸ್ ರೈಲು ವೇಳಾಪಟ್ಟಿ:

  • ರೈಲು ಸಂಖ್ಯೆ 06573 SMVT ಬೆಂಗಳೂರು-ಕಣ್ಣೂರು ವಿಶೇಷ ಎಕ್ಸ್‌ಪ್ರೆಸ್ ಏ. 11 ರಂದು ರಾತ್ರಿ 11:55 ಕ್ಕೆ ಎಸ್‌ಎಂವಿಟಿ ಬೆಂಗಳೂರಿನಿಂದ ಹೊರಟು ಏ.12 ಮಧ್ಯಾಹ್ನ 1:30 ಕ್ಕೆ ಕಣ್ಣೂರು ತಲುಪಲಿದೆ.
  • ರೈಲು ಸಂಖ್ಯೆ 06574 ಕಣ್ಣೂರು-ಎಸ್‌ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ಏ.14 ರಂದು ಸಂಜೆ 6.25 ಕ್ಕೆ ಕಣ್ಣೂರಿನಿಂದ ಹೊರಟು ಏ.15 ಬೆಳಿಗ್ಗೆ 8.00 ಕ್ಕೆ ಎಸ್‌ಎಂವಿಟಿ ಬೆಂಗಳೂರು ತಲುಪಲಿದೆ.

ರೈಲಿಗೆ ಎಲ್ಲೆಲ್ಲಿ ನಿಲುಗಡೆ:
ಬೆಂಗಳೂರು – ಕಣ್ಣೂರು ವಿಶೇಷ ರೈಲಿಗೆ ಕೃಷ್ಣರಾಜಪುರಂ, ಬಂಗಾರಪೇಟೆ, ಕುಪ್ಪಂ, ಸೇಲಂ, ಈರೋಡ್, ತಿರುಪ್ಪೂರ್, ಕೊಯಮತ್ತೂರು, ಪಾಲಕ್ಕಾಡ್, ಶೋರ್ನೂರ್, ತಿರೂರ್, ಕೋಝಿಕ್ಕೋಡ್, ವಡಕ್ಕರ, ತಲಶ್ಶೇರಿ ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.