ಬೈಂದೂರು: ಬಾವಿಗೆ ಬಿದ್ದು ಕೃಷಿಕ ಮೃತ್ಯು

ಬೈಂದೂರು: ಬಾವಿಗೆ ಬಿದ್ದು ಕೃಷಿಕರೊಬ್ಬರು ಮೃತಪಟ್ಟ ಘಟನೆ ಜ.12ರಂದು ರಾತ್ರಿ ವೇಳೆ ಯಡ್ತರೆ ಗ್ರಾಮದ ಆಲಂದೂರು ಎಂಬಲ್ಲಿ ನಡೆದಿದೆ.

ಮೃತರನ್ನು ಸ್ಥಳೀಯ ನಿವಾಸಿ ಕುಷ್ಟು(60) ಎಂದು ಗುರುತಿಸಲಾಗಿದೆ.

ಕೃಷಿ ಕೆಲಸ ಮಾಡಿಕೊಂಡಿದ್ದ ಇವರು, ಕೃಷಿಗೆ ನೀರು ಹಾಯಿಸಲು ಆವರಣವಿಲ್ಲದ ಬಾವಿ ಸಮೀಪ ಹೋದಲ್ಲಿ ಬಾವಿಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.