ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ರವಿಶಾಸ್ತ್ರಿಯವರು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ.

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಪ್ರಸಿದ್ಧ ಕ್ರಿಕೆಟ್ ವೀಕ್ಷಕ ವಿವರಣೆಕಾರ ಶ್ರೀಯುತ ರವಿಶಾಸ್ತ್ರಿಯವರು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿ ಶ್ರೀದೇವರ ದರ್ಶನ ಹಾಗೂ ಶ್ರೀಸುಬ್ರಹ್ಮಣ್ಯ ಮಠದ ಸಂಪುಟ ನರಸಿಂಹ ಸ್ವಾಮಿಯ ದರ್ಶನ ಪಡೆದರು.

ಈ ಸಂದರ್ಭದಲ್ಲಿ ದೇವಾಲಯದ ವತಿಯಿಂದ ಗೌರವಿಸಲಾಯಿತು. ಕುಕ್ಕೆ ಶ್ರೀಸುಬ್ರಹ್ಮಣ್ಯ ಮಠದಲ್ಲಿ ಶ್ರೀವಿದ್ಯಾಪ್ರಸನ್ನತೀರ್ಥ ಶ್ರೀಪಾದರು ಶ್ರೀಯುತ ರವಿಶಾಸ್ತ್ರಿಯವರನ್ನು ಶಾಲು ಹೊದೆಸಿ ಫಲ ಮಂತ್ರಾಕ್ಷತೆ ನೀಡಿ ಅನುಗ್ರಹಿಸಿದರು. ಶ್ರೀವೆಂಕಟರಾಜ, ಶ್ರೀವಾದಿರಾಜ ಪೆಜತ್ತಾಯ, ಶ್ರೀಪಿ.ಲಾತವ್ಯ ಆಚಾರ್ಯ ಉಪಸ್ಥಿತರಿದ್ದರು.