ಉಡುಪಿ: ಮಂಗಳೂರಿನಲ್ಲಿ ನಡೆದ ಮಸಾಜ್ ಸೆಂಟರ್ ದಾಳಿಗೂ ಶ್ರೀರಾಮಸೇನೆಗೂ ಸಂಬಂಧವಿಲ್ಲ ಎಂದು ಶ್ರೀರಾಮಸೇನೆ ಮಂಗಳೂರು ವಿಭಾಗ ಅಧ್ಯಕ್ಷ ಜಯರಾಮ ಅಂಬೆಕಲ್ಲು ಸ್ಪಷ್ಟಪಡಿಸಿದ್ದಾರೆ.
ಈ ದಾಳಿಯಲ್ಲಿ ನಮ್ಮ ಸಂಘಟನೆಯ ಯಾವುದೇ ಕಾರ್ಯಕರ್ತರು ಭಾಗಿಯಾಗಿಲ್ಲ. ಇಂದು ಪ್ರಮೋದ್ ಮುತಾಲಿಕ್ ಅವರ 70ನೇ ವರ್ಷದ ಜನ್ಮದಿನಾಚರಣೆ ನಡೆಯುತ್ತಿದ್ದು, ಎಲ್ಲಾ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಪೂಜೆ ಹವನ ಹಾಗೂ ಇನ್ನಿತರ ಕಾರ್ಯಕ್ರಮ ನಡೆಸುತ್ತಿದ್ದಾರೆ. ಹೆಚ್ಚಿನ ಪದಾಧಿಕಾರಿಗಳು ಅಯೋಧ್ಯೆ ಹಾಗೂ ಕುಂಭ ಮೇಳ ಪ್ರವಾಸದಲ್ಲಿದ್ದಾರೆ ಎಂದರು.