ಉಡುಪಿ ಮಾ.20: ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ ಮಾಡಿರುವ ಘಟನೆಯನ್ನು ರಾಜ್ಯ ಎಸ್ ಸಿ ಮೋರ್ಚಾ ದ ಉಪಾಧ್ಯಕ್ಷ ದಿನಕರ್ ಬಾಬು ಅವರು ತೀವ್ರವಾಗಿ ಖಂಡಸಿದ್ದಾರೆ.
ಉಡುಪಿಯಂತಹ ಜಿಲ್ಲೆಯಲ್ಲಿ ಇಂತಹ ಘಟನೆ ನಡೆದಿರುವುದು ಅತ್ಯಂತ ಕಳವಳಕಾರಿ. ಮಾನವೀಯತೆ ಮರೆತು ಮೃಗಗಳಂತೆ ಹಲ್ಲೆ ಮಾಡಿದ್ದಾರೆ. ಶಿಕ್ಷಿತರಾದ ನಮ್ಮ ಜಿಲ್ಲೆಯ ಪ್ರಜ್ಞಾವಂತ ನಾಗರಿಕರು ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕಾದ ಅಗತ್ಯತೆ ಇದೆ. ಪೊಲೀಸ್ ಇಲಾಖೆ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.












