ಬೆಂಗಳೂರು: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ, ಹಾಗೂ ಇಂದು (ಡಿ.27) ಸರಕಾರಿ ರಜೆ ಘೋಷಿಸಲಾಗಿದೆ.
ಭಾರತ ಕಂಡ ಶ್ರೇಷ್ಠ ಅರ್ಥ ಶಾಸ್ತ್ರಜ್ಞರಲ್ಲಿ ಒಬ್ಬರು ಹಾಗೂ ಒಂದು ದಶಕದ ಕಾಲ ದೇಶದ ಪ್ರಧಾನಿಯಾಗಿದ್ದ ಡಾ.ಮನಮೋಹನ್ ಸಿಂಗ್ ಗುರುವಾರ ರಾತ್ರಿ ದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. 2004 ರಿಂದ 2014 ರವರೆಗೆ ಅವರು ದೇಶದ ಪ್ರಧಾನಿಯಾಗಿದ್ದರು.