ಮೂಡುಬಿದಿರೆ: ಮೂಡಬಿದಿರೆಯ ಶಿರ್ತಾಡಿಯಲ್ಲಿ ಕಾರು ಹಾಗೂ ಆಕ್ಟಿವಾ ನಡುವೆ ಸಂಭವಿಸಿರುವ ಭೀಕರ ಅಪಘಾತದಲ್ಲಿ ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮೂಡುಬಿದಿರೆ ನಾಗರಕಟ್ಟೆ ನಿವಾಸಿ, ಶಿರ್ತಾಡಿಯ ಖಾಸಗಿ ಶಾಲೆಯ ಶಿಕ್ಷಕಿ ಸುಜಯಾ ಭಂಡಾರಿ ಸಾವನ್ನಪ್ಪಿದ ಶಿಕ್ಷಕಿ.
ಸುಜಯಾ ಭಂಡಾರಿ ಅವರು, ಶಿರ್ತಾಡಿಯಿಂದ ಮೂಡುಬಿದಿರೆ ಕಡೆ ಹೋಗುತ್ತಿದ್ದರು. ಆಗ ಮುಂಭಾಗದಿಂದ ಬರುತ್ತಿದ್ದ ಕಾರು ಸುಜಯಾ ಅವರ ಆಕ್ಟಿವಾಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆಸೆಯಲ್ಪಟ್ಟ ಸುಜಯಾ ಅವರ ತಲೆಗೆ ತೀವ್ರ ತರದ ಗಾಯವಾಗಿತ್ತು. ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸುಜಯಾ ಅವರ ಪತಿ ವಿದೇಶದಲ್ಲಿದ್ದಾರೆ. ಸುಜಯಾರಿಗೆ ಅವಳಿ-ಜವಳಿ ಮಕ್ಕಳಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಸುಜಯಾ ಅವರು ಶಿರ್ತಾಡಿ ಹೋಲಿ ಏಂಜಲ್ಸ್ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಈ ಬಗ್ಗೆ ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.












