ಲೋಕಸಭಾ ಚುನಾವಣೆ: ನೀತಿ ಸಂಹಿತೆ ಉಲ್ಲಂಘನೆ – ನಗದು ವಶ

ಉಡುಪಿ, ಮಾರ್ಚ್ 30: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ಹಿನ್ನೆಲೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾ. 29 ರಂದು ಹೆಜಮಾಡಿ ಚೆಕ್‌ಪೋಸ್ಟ್ನಲ್ಲಿ 97,000 ರೂ. ದಾಖಲೆ ರಹಿತ ನಗದನ್ನು ವಶಪಡಿಸಿಕೊಳ್ಳಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.