ಉಡುಪಿ: ಕರ್ನಾಟಕ ಹಿಂದೂ ಧಾರ್ಮಿಕ
ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ
ಅಧಿನಿಯಮ ಅನ್ವಯ ಪ್ರವರ್ಗ ಸಿ ಗೆ ಸೇರಿದ ಜಿಲ್ಲೆಯ ಹೆಬ್ರಿ ತಾಲೂಕು ಶಿವಪುರದ ಶ್ರೀ ಶಂಕರದೇವ ದೇವಸ್ಥಾನಕ್ಕೆ ಮೂರು ವರ್ಷಗಳ ಅವಧಿಗೆ ವ್ಯವಸ್ಥಾಪನಾ ಸಮಿತಿಯನ್ನು ರಚಿಸಲು
ಆಸಕ್ತ ಭಕ್ತಾದಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ
ಆಹ್ವಾನಿಸಲಾಗಿರುತ್ತದೆ.
ಕನಿಷ್ಠ 35 ವರ್ಷ ವಯಸ್ಸು ಮೇಲ್ಪಟ್ಟ ಆಸಕ್ತ ಭಕ್ತಾದಿಗಳು ಯಾವುದೇ ಒಂದು ಅಧಿಸೂಚಿತ ಸಂಸ್ಥೆ ಅಥವಾ ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವ ಕೋರಿ ಅರ್ಜಿಯನ್ನು
ಆಗಸ್ಟ್ 30 ರ ಒಳಗಾಗಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಅಥವಾ ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು
ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಕೊಠಡಿ ಸಂಖ್ಯೆ:206, ಬಿ ಬ್ಲಾಕ್, ಮೊದಲನೇ ಮಹಡಿ, ಜಿಲ್ಲಾ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ
ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.












