ಶ್ರೀ ಕ್ಷೇತ್ರ ಶಂಕರಪುರ : ಉಚಿತ ಚಿನ್ನದ ಮೂಗುತಿ ಕಾರ್ಯಕ್ರಮದ ಮಾಹಿತಿ ಪತ್ರ ಬಿಡುಗಡೆ

ಶಿರ್ವ : ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ, ಕಾಲಭೈರವ ದೇವಸ್ಥಾನ ವತಿಯಿಂದ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಮಹಾ ಸಂಕಲ್ಪದಲ್ಲಿ 2025 ನವರಾತ್ರಿಯಂದು ನಡೆಯುವ ಉಚಿತ ಚಿನ್ನದ ಮೂಗುತಿ ಕಾರ್ಯಕ್ರಮದ ಮಾಹಿತಿ ಪತ್ರ ವೀಣಾ ಶೆಟ್ಟಿ ಹಾಗೂ 5 ಕನ್ಯೆಯರಿಂದ ಕ್ಷೇತ್ರದಲ್ಲಿ ಬಿಡುಗಡೆಯಾಯಿತು.

ಸನಾತನ ಹಿಂದೂ ಧರ್ಮದ ಹೆಣ್ಣು ಮಕ್ಕಳ ರಕ್ಷಣೆ ಹಾಗೂ ಹೆಣ್ಣು ಮಕ್ಕಳ ಭಾಗ್ಯೋದಯದ ಬೆಳಕು ಶ್ರೀ ಸೌಭಾಗ್ಯ ಕಾರ್ಯಕ್ರಮದಡಿಯಲ್ಲಿ 9 ರಿಂದ 19 ವರ್ಷದ 1008 ಹೆಣ್ಣು ಮಕ್ಕಳಿಗೆ ಉಚಿತ ಚಿನ್ನದ ಮೂಗುತಿ ನವರಾತ್ರಿ ದುರ್ಗಾಷ್ಟಮಿಯ ಪರ್ವ ಕಾಲದಲ್ಲಿ ನಡೆಯಲಿದೆ.

ಈ ಸಂದರ್ಭ ಶ್ರೀ ಕ್ಷೇತ್ರದ ಪ್ರಮುಖರು ಉಪಸ್ಥಿತರಿದ್ದರು.