ಉಡುಪಿ:ತ್ರಿಶಾ ಕ್ಲಾಸಸ್ : ಸಿಎಸ್ಇಇಟಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಸಿ ಎಸ್ ಎಕ್ಸಿಕ್ಯೂಟಿವ್ ಮಾಹಿತಿ ಕಾರ್ಯಾಗಾರ

ಉಡುಪಿ: ತ್ರಿಶಾ ಕ್ಲಾಸಸ್ ವತಿಯಿಂದ ಸಿಎಸ್ಇಇಟಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಸಿ ಎಸ್ ಎಕ್ಸಿಕ್ಯೂಟಿವ್ ಮಾಹಿತಿ ಕಾರ್ಯಾಗಾರವನ್ನು ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನಲ್ಲಿ ನವೆಂಬರ್ 23 ರಂದು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ತ್ರಿಶಾ ಸಂಸ್ಥೆಯ ಸಂಸ್ಥಾಪಕರು ಸಿಎ ಗೋಪಾಲಕೃಷ್ಣ ಭಟ್ ಅವರು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಜೊತೆಗೆ ತಮ್ಮ ಮುಂದಿನ ಹಂತದಲ್ಲಿ ಇರಬೇಕಾದ ತಾಳ್ಮೆ, ಸತತ ಪ್ರಯತ್ನ, ಕಠಿಣ ಪರಿಶ್ರಮದ ಬಗ್ಗೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಸಾಧಕ ವಿದ್ಯಾರ್ಥಿಗಳನ್ನು ಹೆತ್ತವರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡರು. ನಂತರ ತ್ರಿಶಾ ಕ್ಲಾಸಸ್ ನ ಪ್ರಾಧ್ಯಾಪಕರಾದ ಸಿಎ ನಾಗೇಂದ್ರ ಭಕ್ತ ಅವರು ವಿದ್ಯಾರ್ಥಿಗಳಿಗೆ ಸಿ ಎಸ್ ಎಕ್ಸಿಕ್ಯೂಟಿವ್ ಕೋರ್ಸಿನ ಬಗ್ಗೆ ಹಾಗೂ ಪರೀಕ್ಷಾ ಪೂರ್ವ ತಯಾರಿಯ ಬಗ್ಗೆ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಸಿದ್ಧಾಂತ್ ಫೌಂಡೇಶನ್ ಟ್ರಸ್ಟಿ ರಾಮ್ ಪ್ರಭು, ತ್ರಿಶಾ ಕ್ಲಾಸಸ್ ನ ಪ್ರಾಧ್ಯಾಪಕರಾದ ಪ್ರೊ. ರಾಜ್ ಗಣೇಶ್‌ ಕಾಮತ್ , ತ್ರಿಶಾ ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ತ್ರಿಶಾ ಕ್ಲಾಸಸ್ ನ ಶೈಕ್ಷಣಿಕ ಸಂಯೋಜಕರಾದ ಪ್ರಜ್ಞಾ ಸ್ವಾಗತಿಸಿ, ಸ್ವಾತಿ ವಂದಿಸಿದರು.