ಉಡುಪಿ: ಕರಾವಳಿ ಸಿಮೆಂಟ್ ಡೀಲರ್ಸ್ ಅಸೋಸಿಯೇಶನ್ ಮಂಗಳೂರು ಇದರ 2024-26ರ ನೂತನ ಅಧ್ಯಕ್ಷರಾಗಿ ಸಚ್ಚಿದಾನಂದ ನಾಯಕ್ ಮಣಿಪಾಲ ಅವರು ಆಯ್ಕೆಯಾಗಿದ್ದಾರೆ.
ಮಂಗಳೂರು ಮತ್ತು ಉಡುಪಿ ಜಿಲ್ಲೆಯ ಸಿಮೆಂಟ್ ಡೀಲರ್ಸ್ ಅಸೋಸಿಯೇಶನ್ ಉಡುಪಿಯ ಕಿದಿಯೂರು ಹೊಟೇಲ್ ಶೇಷಶಯನ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2024-26ರ ಅವಧಿಗೆ ನೂತನ ಅಧ್ಯಕ್ಷರಾಗಿ ಮಣಿಪಾಲದ ಪಿ. ಸಚ್ಛಿದಾನಂದ ನಾಯಕ್, ಉಪಾಧ್ಯಕ್ಷರಾಗಿ ಮಂಗಳೂರು ಇಸ್ಮಾಯಿಲ್ ಇಕ್ಬಾಲ್ ನೆಕ್ಕಿಲಾಡಿ, ಕಾರ್ಯದರ್ಶಿ ಮಂಗಳೂರಿನ ಪ್ರವೀಣ್ ತೋಡುವೆಲ್, ಖಜಾಂಜಿಯಾಗಿ ಉಡುಪಿಯ ಕೆ. ಗಣೇಶ್ ನಾಯಕ್ ಶಿರಿಯಾರ ಮತ್ತು ಜತೆ ಕಾರ್ಯದರ್ಶಿಯಾಗಿ ಮಂಗಳೂರು ಕಿರಣ್ ಕ್ಯಾಸ್ತಲಿನೋ ಕುಲಶೇಖರ ಅವರನ್ನು ಆಯ್ಕೆ ಮಾಡಲಾಗಿದೆ.
ಹೊಸ ಕಾರ್ಯಕಾರಿ ಮಂಡಳಿಯನ್ನು ಸರ್ವಾನುಮತದಿಂದ ಆರಿಸಲಾಯಿತು.
ಸಭೆಯಲ್ಲಿ ಚೆಟ್ಟಿನಾಡ್ ಸಿಮೆಂಟ್ ಈ ಕಾರ್ಯಕ್ರಮದ ಪ್ರಾಯೋಜಕರಾದ ದಕ್ಷಿಣ ಭಾರತದ ಪ್ರಮುಖ ಸಿಮೆಂಟ್ ಉತ್ಪಾದಕರಾದ ಚೆಟ್ಟಿನಾಡ್ ಸಿಮೆಂಟ್ ಕಾರ್ಪೊರೇಷನ್ ಪ್ರೈವೇಟ್ ಲಿಮಿಟೆಡ್ ಇದರ ರಾಜ್ಯ ಸೇಲ್ಸ್ ಪ್ರಮುಖ ವಿಜಯ್ ಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.












