ಉಡುಪಿ: ರೈಲಿನಿಂದ ಇಳಿಯುವಾಗ ಆಯತಪ್ಪಿ ಬಿದ್ದ ವಿದ್ಯಾರ್ಥಿನಿ- ಪ್ರಾಣಾಪಾಯದಿಂದ ಪಾರು

ಉಡುಪಿ: ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ರೈಲಿನಿಂದ ಇಳಿಯುವಾಗ ಆಯತಪ್ಪಿ ಬಿದ್ದು ಕೈಮುರಿತಗೊಂಡ ವೈದ್ಯಕೀಯ ವಿದ್ಯಾರ್ಥಿನಿಯನ್ನು ರಕ್ಷಿಸಿ, ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಅಜ್ಜರಕಾಡಿನ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ರಕ್ಷಿಸಲ್ಪಟ್ಟ ವಿದ್ಯಾರ್ಥಿನಿಯನ್ನು ಕೇರಳ ಪಾಲಕ್ಕಾಡಿನ ಅನುಶ್ರೀ ಬಿ. (22) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿಯು ರೈಲು ನಿಲುಗಡೆಗೆ ಬಂದಾಗ ನಿದ್ದೆಯ ಮಂಪರಿನಲ್ಲಿದ್ದಳು.

ರೈಲು ನಿಲುಗಡೆ ನೀಡಲು ನಿಧಾನಗತಿಯಲ್ಲಿ ಚಲಿಸುತ್ತಿರುವಾಗ ಇಳಿದಿದ್ದರಿಂದ ಅವಘಡ ಸಂಭವಿಸಿದೆ. ಕಾರ್ಯಾಚರಣೆಗೆ ರೈಲ್ವೆ ಮಹಿಳಾ ಆ‌ರ್ ಪಿಎಫ್ ಸಹಕರಿಸಿದ್ದಾರೆ.