ಕುಂದಾಪುರ: ಕರಾಟೆ ಪಂದ್ಯಾಟದಲ್ಲಿ ಜನತಾ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ.

ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ( ಪದವಿ ಪೂರ್ವ ವಿಭಾಗ) ಹಾಗೂ ಎಸ್. ಎನ್. ವಿ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕ – ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಮೂವರು ವಿದ್ಯಾರ್ಥಿಗಳು ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಕ್ರಮವಾಗಿ ಸಾಯಿ ವಿಘ್ನೇಶ್(82+kg) ವಿಭಾಗದಲ್ಲಿ ಪ್ರಥಮ ಸ್ಥಾನ,
ಅಶ್ಮಿತ್ ಸಿ.ಪೂಜಾರಿ (-45kg) ಪ್ರಥಮ ಸ್ಥಾನ, ಅಮಿತ್ (-54kg) ಕುಮಾರ್ ಪ್ರಥಮ ಸ್ಥಾನ.
ಹಾಗೂ ನಾಲ್ವರು ವಿದ್ಯಾರ್ಥಿಗಳು ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿಯ ಪದಕಗಳನ್ನು ಪಡೆದಿರುತ್ತಾರೆ. ಕ್ರಮವಾಗಿ, ರನಿತಾ(-36 kg), ರಾಹುಲ್ ಜಿ, (-58kg)ಅರ್ಜುನ್ ಎಸ್ ಶೆಟ್ಟಿ,(-50 kg)ನಿಖಿಲ್ ಕಾಂಚನ್.(72+kg).

ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.