ಕುಂದಾಪುರ: ಗೋ ಕಳ್ಳತನ ತಪ್ಪಿಸಿದ ಸೈನ್‌ ಇನ್‌ ಸೆಕ್ಯುರಿಟಿ

ಉಡುಪಿ: ಸೈನ್‌ ಇನ್‌ ಸೆಕ್ಯುರಿಟಿ ಸಂಸ್ಥೆಯಲ್ಲಿ ಲೈವ್ ಮಾನಿಟರಿಂಗ್‌ನಲ್ಲಿ ಕಾರ್ ನಿರ್ವಹಿಸುತ್ತಿದ್ದ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಅಕ್ರಮ ಗೋ ಸಾಗಾಟಕ್ಕೆ ಯತ್ನಿಸಿದ್ದ ದುಷ್ಕರ್ಮಿಗಳ ಸಂಚು ವಿಫಲಗೊಂಡಿದೆ.

ಕುಂದಾಪುರ ತಾಲೂಕು ಬೀಜಾಡಿ ಜಂಕ್ಷನ್ ನಲ್ಲಿ ಘಟನೆ ನಡೆದಿದೆ. ರಿಟ್ಜ್ ಕಾರಿನಲ್ಲಿ ಬಂದ ನಾಲ್ಕು ಮಂದಿ ದನಕಳ್ಳರು ರಸ್ತೆ ಬದಿ ಮಲಗಿದ್ದ ದನದ ಕೈ ಕಾಲುಗಳನ್ನು ಕಟ್ಟಿ ಕಾರಿನ ಹಿಂಭಾಗದಲ್ಲಿ ತುಂಬಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರು.

ಸೈನ್ ಇನ್ ಸೆಕ್ಯೂರಿಟಿ ಸಂಸ್ಥೆಯ ಸಿಸಿಟಿವಿ ಲೈವ್ ನಲ್ಲಿ ವೀಕ್ಷಣೆ ಮಾಡುತ್ತಿದ್ದ ಸಿಬ್ಬಂದಿ, ತಕ್ಷಣ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪೊಲೀಸರನ್ನು ಕಂಡ ದುಷ್ಕರ್ಮಿಗಳು ಜಾನುವಾರುಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ‌.

ಪೊಲೀಸರು ದನದ ಕೈ ಕಾಲು ಬಿಚ್ಚಿ ವಶಪಡಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಸೈನ್ ಇನ್ ಸೆಕ್ಯೂರಿಟಿ ಸಂಸ್ಥೆಯ ಸಿಸಿಟಿವಿ ಲೈವ್ ನಿಂದ ಈ ಹಿಂದೆಯೂ ಅನೇಕ ಅಕ್ರಮ ಗಳಿಗೆ ಕಡಿವಾಣ ಬಿದ್ದಿದೆ.