ಉಡುಪಿ: ಕುಂದಾಪುರ ತಾಲೂಕಿನ ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ ಮಾಡುತ್ತಿದ್ದ ವೀಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ತಾಲೂಕಿನ ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಯಡಾಡಿ-ಮತ್ಯಾಡಿ ಗ್ರಾಮದ ಕರಿನಕಟ್ಟೆ ರಾಮದಾಸ ಭಂಡಾರಿ ಎಂಬವರು ಮನೆಯ ಅಂಗಳದಲ್ಲಿ ಚಿರತೆ ಸಂಚಾರ ನಡೆಸಿದ್ದು, ಇದ್ದರಿಂದ ಮನೆಯವರು, ನೆರೆ-ಹೊರೆಯವರು ಆತಂಕಗೊಂಡಿದ್ದಾರೆ.
ಪದೇ ಇಲ್ಲಿ ಚಿರತೆಗಳು ಕಾಣಿಸಿಕೊಳ್ಳುತ್ತಿದ್ದು, ಇದರ ಬಗ್ಗೆ ಸಂಬಂದಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.












