ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ಪ್ರೋತ್ಸಾಹ ಧನ ವಿತರಣೆ

ಕುಂದಾಪುರ: ಚಿನ್ಮಯಿ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಉಮೇಶ್ ಪುತ್ರನ್ ರವರು ಪ್ರತಿ ವರ್ಷ 25,000 ರೂಪಾಯಿಯ ಪ್ರೋತ್ಸಾಹ ಧನವನ್ನು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ PCMB ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗೆ ನೀಡುತ್ತಾ ಬಂದಿದ್ದು, 2023- 2024 ನೇ ಶೈಕ್ಷಣಿಕ ಸಾಲಿನಲ್ಲಿ 592 ಅಂಕ ಗಳಿಸಿ, ರಾಜ್ಯಕ್ಕೆ 7 ನೇ ಸ್ಥಾನಿಯಾಗಿರುವ ಸಂಜನಾ.ಎನ್ ರವರಿಗೆ ಶಾಲಾ ಸಂಸ್ಥಾಪನಾ ದಿನದಂದು ನಡೆದ ಸಮಾರಂಭದಲ್ಲಿ ಸುಮಾ. ಯು ಪುತ್ರನ್ ಪ್ರೋತ್ಸಾಹ ಧನದ ಚೆಕ್ ನ್ನು ಹಸ್ತಾಂತರಿಸಿದರು.