ಜ್ಞಾನಸುಧಾ: ಪದವಿ ಪೂರ್ವ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ನಾಲ್ವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಉಡುಪಿ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ವತಿಯಿಂದ ಮಂಡ್ಯದ ವಿಶ್ವಮಾನವ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ರಸಪ್ರಶ್ನಾ ಸ್ಪರ್ಧೆಯಲ್ಲಿ ಉಡುಪಿ ಜ್ಞಾನಸುಧಾ ಪಿಯು ಕಾಲೇಜಿನ ಆದಿತ್ಯ ಕಾಮತ್ ಹಾಗೂ ಪ್ರಥಮ್ ಶೆಟ್ಟಿ ಪ್ರಥಮ ಸ್ಥಾನವನ್ನು, ಇಂಗ್ಲಿಷ್ ಆಶುಭಾಷಣ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ತನ್ವಿ ಶೆಟ್ಟಿ ದ್ವಿತೀಯ ಸ್ಥಾನವನ್ನು ಮತ್ತು ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪಿಯು ಕಾಲೇಜಿನ ಅವನೀ ಉಪಾಧ್ಯ ತೃತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಿದ್ಯಾರ್ಥಿಗಳ ಸಾಧನೆಗೆ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಹಾರೈಸಿದ್ದಾರೆ.