ಉಡುಪಿ: ಬೈಂದೂರು ತಾಲೂಕು ಯಳಜಿತ್ ಗ್ರಾಮದ ಹುಲ್ಕಡಕಿ ನಿವಾಸಿ ಬಸವ (38) ಎಂಬ ವ್ಯಕ್ತಿಯು ಏಪ್ರಿಲ್
17 ರಂದು ಮನೆಯಿಂದ ಹೋದವರು ಇದೂವರೆಗೂ ವಾಪಾಸು ಬಾರದೇ ನಾಪತ್ತಯಾಗಿರುತ್ತಾರೆ.
5 ಅಡಿ ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-251033, ಮೊ.ನಂ: 9480805459, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ: 9480805434 ಹಾಗೂ ಕಂಟ್ರೋಲ್ ರೂಂ 100 (0820-2526444) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೈಂದೂರು ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.












