ಬ್ರಹ್ಮಗಿರಿ-ಅಜ್ಜರಕಾಡು ಕಳಪೆ ರಸ್ತೆ ಜೆಸಿಬಿ ಮೂಲಕ ತೆರವು

ಉಡುಪಿ: ಕೆಲವು ತಿಂಗಳುಗಳ ಹಿಂದೆಯಷ್ಟೆ ಡಾಂಬರೀಕರಣಗೊಂಡಿದ್ದ ಬ್ರಹ್ಮಗಿರಿಯಿಂದ ಅಜ್ಜರಕಾಡು ಜಿಲ್ಲಾಸ್ಪತ್ರೆವರೆಗಿನ ಮುಖ್ಯ ರಸ್ತೆಯಲ್ಲಿ ಹೊಂಡ ಗುಂಡಿ ಬಿದ್ದಿದ್ದು, ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ವಾಹನಗಳು ಸಂಚರಿಸಲಾಗದ ಪರಿಸ್ಥಿತಿ ಎದುರಾಗಿದೆ.

ನಗರಸಭೆ ಪರ್ಯಾಯ ಮಹೋತ್ಸವದ ಅನುದಾನದಿಂದ ಈ ರಸ್ತೆಗೆ 35 ಲಕ್ಷ ಹಣ ಮಂಜೂರು ಮಾಡಿತ್ತು. ಗುತ್ತಿಗೆದಾರ ಕಳಪೆ ಕಾಮಗಾರಿ ನಡೆಸಿ, ಇತ್ತೀಚೆಗೆ ಅದರ ಮೇಲೆ ತೇಪೆ ಹಚ್ಚಿಸಿದ್ದರು.ಇದರ ವಿರುದ್ಧ ಸಮಾಜಸೇವಕರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೂ ಮುಂದಾಗಿದ್ದರು.

ಇಂದು ನಗರಸಭೆ ಆಯುಕ್ತ ರಾಯಪ್ಪ ನೇತೃತ್ವದಲ್ಲಿ ಈ ರಸ್ತೆಯ ತೇಪೆಯನ್ನು ಜೆಸಿಬಿ ಮೂಲಕ ತೆರವು ಗೊಳಿಸಲಾಯಿತು.ಬಳಿಕ ಮಾತನಾಡಿದ ರಾಯಪ್ಪನವರು, ಮಳೆ ಮುಗಿದ ತಕ್ಷಣ ಈ ರಸ್ತೆಯನ್ನು ವೈಜ್ಞಾನಿಕವಾಗಿ ಮತ್ತೆ ಮಾಡಿಕೊಡಬೇಕು. ಗುತ್ತಿಗೆದಾರನ 45 ಲಕ್ಷ ಹಣವನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಸಂಪೂರ್ಣ ವೈಜ್ಞಾನಿಕ ರೀತಿಯಲ್ಲಿ ರಸ್ತೆ ಮಾಡಿದ ನಂತರ ಅವರ ಹಣ ಕೊಡಲಾಗುವುದು. ಇದು ಎಲ್ಲ ಗುತ್ತಿಗೆದಾರರಿಗೂ ಎಚ್ಚರಿಕೆ ಎಂದು ಹೇಳಿದ್ದಾರೆ.

Oplus_0