ಬ್ರಹ್ಮಾವರ: ಮಹಿಳೆ ನಾಪತ್ತೆ

ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಇಲ್ಲಿನ ಉಪ್ಪಿನಕೋಟೆಯಲ್ಲಿ ವಾಸವಿದ್ದ ಲಲಿತಾ ಪೂಜಾರಿ (31) ಅವರು ನ. 30ರಿಂದ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಬಳಿಕ ಮನೆಯ ಒಳಗಡೆ ಪರಿಶೀಲಿಸುವಾಗ ಚಿಕ್ಕ ಮೂರು ಚೀಟಿಯಲ್ಲಿ ಹಾಗೂ ಪುಸ್ತಕದ ಹಾಳೆಯಲ್ಲಿ ನನ್ನ ಸಾವಿಗೆ ಯಾರೂ ಕಾರಣ ಅಲ್ಲ, ನಾನೇ ಕಾರಣ. ಇಂತಿ ನಿಮ್ಮ ಚಿನ್ನು ಎಂದು ಬರೆದಿಟ್ಟ ಚೀಟಿ ಸಿಕ್ಕಿದೆ.

ಈ ಕುರಿತು ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.