ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ: ಫೆ.14ರಂದು ಶ್ರೀ ಮನ್ಮಹಾರಥೋತ್ಸವ

ಬ್ರಹ್ಮಾವರ: ಮಂದಾರ್ತಿ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಫೆಬ್ರವರಿ 13 ಕುಂಭ ಸಂಕ್ರಮಣದಂದು ರಾತ್ರಿ ಕೆಂಡೆಸೇವೆ, 14ರಂದು ಶ್ರೀ ಮನ್ಮಹಾರಥೋತ್ಸವ, 15ರಂದು ರಾತ್ರಿ ಕೆರೆ ದೀಪೋತ್ಸವ, ಪಲ್ಲಕ್ಕಿ ಉತ್ಸವ, ಅಷ್ಟವಧಾನ ಸೇವೆ ನಡೆಯಲಿದ್ದು, ಆನಂತರ ಐದು ಮೇಳಗಳಿಂದ ಸೇವೆ ಆಟ ನಡೆಯಲಿದೆ.

ದೇವಸ್ಥಾನದಲ್ಲಿ ವರ್ಷದಿಂದ ವರ್ಷಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗಿ ಹೆಚ್ಚುತ್ತಿರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಕೆಂಡಸೇವೆ ಈ ಬಾರಿ ಮಾಮೂಲಿಗಿಂತ ಬೇಗನೆ ಪ್ರಾರಂಭಗೊಳ್ಳಲಿದೆ.

ರಾತ್ರಿ 7ರಿಂದ ಸೇವಾ ಚೀಟಿ ನೀಡಲು ಪ್ರಾರಂಭವಾಗಲಿದ್ದು, ರಾತ್ರಿ 9ಕ್ಕೆ ದರ್ಶನ ಸೇವೆ ಮುಗಿದ ಅನಂತರ ಕೆಂಡ ಸೇವೆ ಜರಗಲಿದೆ.

ರಸೀದಿ ಮಾಡಿದವರಿಗೆ ಮಾತ್ರವೇ ಗೆಂಡ ಸೇವೆ ಅವಕಾಶ ಇರಲಿದೆ ಎಂದು ದೇಗುಲವು ಪ್ರಕಟಣೆ ತಿಳಿಸಿದೆ.