ಮಣಿಪಾಲ: ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿ ವಂಚನೆ: ಪ್ರಕರಣ ದಾಖಲು

ಮಣಿಪಾಲ: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚಿನ ಲಾಭಾಂಶಕ್ಕಾಗಿ ವ್ಯಕ್ತಿಯೊಬ್ಬರು ಹಣ ಹೂಡಿಕೆ ಮಾಡಿ ಲಕ್ಷಾಂತರ ರೂ. ವಂಚನೆಗೆ ಒಳಗಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ.

ಸಂತೋಷನಗರದ ಮಹಮ್ಮದ್ ಶರೀಫ್(28) ಎಂಬವರು ಹೆಚ್ಚಿನ ಲಾಭಾಂಶ ನೀಡುವ ಮೊಬೈಲ್ ಸಂದೇಶವನ್ನು ನಂಬಿ ಹಣ ಹೂಡಿಕೆ ಮಾಡಿದ್ದರು. ಇವರು ಬೇರೆ ಬೇರೆ ಅವಧಿಯಲ್ಲಿ ಒಟ್ಟು 8,46,583ರೂ. ಹಣವನ್ನು ಹೂಡಿಕೆ ಮಾಡಿದ್ದು, ಆರೋಪಿಗಳು ಆ ಹಣವನ್ನು ತಮ್ಮ ಖಾತೆಗೆ ಮೋಸದಿಂದ ವರ್ಗಾಯಿಸಿಕೊಂಡು ವಂಚಿಸಿರುವುದಾಗಿ ದೂರಲಾಗಿದೆ.