ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ

ಉಡುಪಿ: ಶ್ರೀಕೃಷ್ಣಮಠಕ್ಕೆ ಮಾಜಿ ಉಪಮುಖ್ಯಮಂತ್ರಿಗಳಾದ ಈಶ್ವರಪ್ಪನವರು ಆಗಮಿಸಿ ದೇವರ ದರ್ಶನ ಪಡೆದು, ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಇವರಿಂದ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಬಿ.ಜೆ.ಪಿ.ಜಿಲ್ಲಾ ವಕ್ತಾರರಾದ ರಾಘವೇಂದ್ರ ಕಿಣಿ, ಸ್ವಾಗತ ಸಮಿತಿ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಮೊದಲಾದವರು ಉಪಸ್ಥಿತರಿದ್ದರು.