ಉಡುಪಿ: ಜಿಲ್ಲೆಯಲ್ಲಿ ಜಿ.ಪಿ.ಎಸ್ ಆಧಾರಿತ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯವು ಖಾಸಗಿ ನಿವಾಸಿಗಳ ಮೂಲಕ ಕೈಗ್ಗೊಳ್ಳಲಾಗುತ್ತಿದ್ದು, ಬೆಳೆ ಸಮೀಕ್ಷೆ ಮಾಹಿತಿಯನ್ನು ಪ್ರಕೃತಿ ವಿಕೋಪಗಳ ಪರಿಹಾರ ವಿತರಣೆ, ಬೆಳೆ ವಿಮೆ ಯೋಜನೆ ಅನುಷ್ಠಾನ, ಬೆಳೆ ಸಾಲ, ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು, ಬೆಂಬಲ ಬೆಲೆ ಯೋಜನೆಯ ಅರ್ಹ ಫಲಾನುಭವಿಗಳ ಗುರುತಿಸುವಿಕೆ, ಋತುಮಾನವಾರು ವಿವಿಧ ಬೆಳೆಗಳ ವಿಸ್ತೀರ್ಣ ವರದಿ ಕಾರ್ಯ, ಬೆಳೆ ಕಟಾವು ಪ್ರಯೋಗ ಅನುಷ್ಠಾನ ಹಾಗೂ ಕೃಷಿ/ತೋಟಗಾರಿಕೆ/ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನಕ್ಕೆ ಬಳಸಲಾಗುವುದು.
ಬೆಳೆ ಸಮೀಕ್ಷೆಯಲ್ಲಿ ನಮೂದಾದ ಬೆಳೆಗಳ ಬಗ್ಗೆ ರೈತರಿಗೆ ಆಕ್ಷೇಪಣೆ ಇದ್ದಲ್ಲಿ “ಬೆಳೆ ದರ್ಶಕ್” ಮೊಬೈಲ್ ಆ್ಯಪ್ ಮೂಲಕ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿದ್ದು, “ Bele Darshak – 2024-2025” ಆ್ಯಪ್ ಅನ್ನು ಗೂಗಲ್ ಪ್ಲೇ ಸ್ಟೋರ್ನಿಂದ ಡೌನ್ಲೋಡ್ ಮಾಡಿಕೊಂಡು ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದೆ.
ರೈತರಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ಸಂಬಂಧಿಸಿದ ಗ್ರಾಮದ ಮೇಲ್ವಿಚಾರಕರಿಂದ ಪರಿಶೀಲಿಸಿ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.












