ಮೂಡಗಲ್ಲು ಕೇಶವನಾಥೇಶ್ವರ ಗುಹಾಂತರ ದೇವಾಲಯಕ್ಕೆ ಜೂನಿಯರ್ ಎನ್ ಟಿಆರ್, ರಿಷಬ್ ಶೆಟ್ಟಿ ಭೇಟಿ

ಉಡುಪಿ: ತೆಲುಗಿನ ಖ್ಯಾತ ನಟ ಜೂನಿಯರ್ ಎನ್ ಟಿಆರ್ ಹಾಗೂ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಕುಂದಾಪುರ ತಾಲೂಕಿನ ಕೆರಾಡಿ ಗ್ರಾಮದ ಮೂಡಗಲ್ಲು ಕೇಶವನಾಥೇಶ್ವರ ಗುಹಾಂತರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿದರು.

Oplus_0

ಜ್ಯೂನಿಯರ್ ಎನ್ ಟಿಆರ್, ರಿಷಬ್ ಶೆಟ್ಟಿ ಅವರು ಬೆಟ್ಟದ ತಪ್ಪಲಿನಲ್ಲಿ ಓಡಾಡುವ ದೃಶ್ಯ ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿದೆ.

Oplus_0

ಅಮ್ಮನ ಆಸೆ ತೀರಿಸಲು ಉಡುಪಿಯ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದ ಜ್ಯೂ.ಎನ್ ಟಿ ಆರ್ ಅವರು, ಗೆಳೆಯ ರಿಷಬ್ ಜೊತೆ ತನ್ನ ತಾಯಿಯ ತವರು ಕುಂದಾಪುರದಲ್ಲಿ ವಿವಿಧ ಸ್ಥಳಗಳಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ದೇವಾಲಯದ ಪ್ರಾಕೃತಿಕ ರಮಣೀಯತೆಯನ್ನು ಕಣ್ತುಂಬಿಕೊಂಡರು. ನಿರ್ದೇಶಕ ಪ್ರಶಾಂತ್ ನೀಲ್, ನಟ ಪಮೋದ್ ಶೆಟ್ಟಿ ಸಾಥ್ ನೀಡಿದರು.

Oplus_0