ರಸ್ತೆ ನಿಮಯ ಕಟ್ಟುನಿಟ್ಟಾಗಿ ಪಾಲಿಸಿದಲ್ಲಿ‌ ಅಪಘಾತ ತಡೆಗಟ್ಟಲು ಸಾಧ್ಯವಿದೆ

ಉಡುಪಿ: ಜಿಲ್ಲೆಯಲ್ಲಿ ಪ್ರತಿ ವರ್ಷ ರಸ್ತೆ ಅಪಘಾತದಲ್ಲಿ 250 ಮಂದಿ ಸಾವನ್ನಪ್ಪುತ್ತಿದ್ದಾರೆ. ಸರಾಸರಿ ಒಂದೂವರೆ ದಿನಕ್ಕೆ ಒಬ್ಬರಂತೆ ಅಪಘಾತದಿಂದ ಜೀವ ಕಳೆದುಕೊಳ್ಳುತ್ತಿರುವುದು ದುರದೃಷ್ಟಕರ ಎಂದು ಜಿಲ್ಲಾ ಎಸ್ಪಿ ಡಾ.ಅರುಣ್ ಕಳವಳ ವ್ಯಕ್ತಪಡಿಸಿದರು.

ಉಡುಪಿ ಜಿಲ್ಲಾ ಪೋಲಿಸ್, ಉಡುಪಿ ಉಪ ವಿಭಾಗದ ವತಿಯಿಂದ ನಗರದ ಬನ್ನಂಜೆಯ ನಾರಾಯಣ ಗುರು ಸಭಾಭವನದಲ್ಲಿ ಗುರುವಾರ ಆಯೋಜಿಸಿದ ಅಪರಾಧ ತಡೆ ಮಾಸಾಚರಣೆ – 2024 ಕಾರ್ಯಕ್ರಮದಲ್ಲಿ ಅವರು‌ ಮಾತನಾಡಿದರು.

Oplus_131072

ವಾಹನ ಚಾಲನೆಯ ವೇಳೆ ಅಗತ್ಯ ಮುಂಜಾಗೃತ ಕ್ರಮಗಳನ್ನು ವಹಿಸಿದಲ್ಲಿ ಅಪಘಾತಗಳನ್ನು ತಡೆಗಟ್ಟಬಹುದು ಎಂದರು.

ದ್ವಿಚಕ್ರ ವಾಹನ ಚಾಲಕರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಬೈಕ್ ಚಲಾಯಿಸಬೇಕು. ಕಾರು ಚಾಲಕರು ಸೀಟ್ ಬೆಲ್ಟ್ ಹಾಕಿಕೊಂಡೇ ಕಾರು ಓಡಿಸಬೇಕು ಎಂಬ ಕಾನೂನು ಇದೆ. ಇದು ಕೇವಲ ಕಾನೂನಲ್ಲ, ವಾಹನ ಚಾಲಕರ ಜೀವವನ್ನು ಉಳಿಸಲು ಸಹಕಾರಿ. ಅನೇಕ ಅಪಘಾತ ಪ್ರಕರಣಗಳಲ್ಲಿ ಹೆಲ್ಮೆಟ್ ಧರಿಸಿದವರು, ಸೀಟ್ ಬೆಲ್ಟ್ ಹಾಕಿಕೊಂಡವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಹೀಗಾಗಿ ಕಾನೂನಿನ ಪಾಲನೆ ಎಂದು ಅರಿಯದೇ ನಮ್ಮ ಜೀವವನ್ನು ಉಳಿಸಿಕೊಳ್ಳಲು ಮುಂಜಾಗ್ರತಾ ಕ್ರಮವನ್ನು ಅನುಸರಿಸಬೇಕು‌ ಎಂದು ಸಲಹೆ ನೀಡಿದರು.

Oplus_131072

ತಂತ್ರಜ್ಞಾನದಲ್ಲಿ ಮುಂದುವರಿಯುತ್ತಿರುವ ಜಗತ್ತಿನಲ್ಲಿ ಸೈಬರ್ ಕ್ರೈಮ್, ಆನ್ ಲೈನ್ ಸ್ಕ್ಯಾಮ್ ಗಳು ಪೋಲಿಸ್ ಇಲಾಖೆಗೆ ಹೊಸ ಸವಾಲಾಗಿ ಪರಿಣಮಿಸಿದೆ. ಸೈಬರ್ ಕ್ರೈಮ್ ಗಳನ್ನು ಕೃತ್ಯ ಆಗುವ ಮೊದಲೇ ತಡೆಗಟ್ಟಲು ಸಾಧ್ಯವಿದೆ. ಸೈಬರ್ ವಂಚನೆ ಬೆಳಕಿಗೆ ಬಂದ ತಕ್ಷಣ 193 ಕಾಲ್ ಮಾಡಿ ಮಾಹಿತಿ ನೀಡಿದರೇ ತಮ್ಮ ಬ್ಯಾಂಕ್ ಖಾತೆಯಲ್ಲಿನ ಹಣ ಫ್ರೀಝ್ ಮಾಡಲು ಸಾಧ್ಯವಿದೆ‌. ಜೊತೆಗೆ ಆಧಾರ್ ಕಾರ್ಡ್ ಗಳಿಗೆ ಬಯೋಮೆಟ್ರಿಕ್ ಲಾಕ್ ಅನ್ನು ಬಳಸಿ ಎಂದು ಸಲಹೆ ನೀಡಿದರು.

Oplus_131072

ಹಾಸ್ಯ ಕಲಾವಿದ ಅರವಿಂದ್ ಬೋಳಾರ್, ಖಾಸಗಿ ವಾಹಿನಿಯ ಮಾಲೀಕ ವಾಲ್ಟರ್ ನಂದಳಿಕೆ, ಮದುಮೇಹ ತಜ್ಞೆ ಡಾ.ಶ್ರುತಿ ಬಲ್ಲಾಳ್, ಮಾಡೆಲ್ ಸ್ಪೂರ್ತಿ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಹೆಚ್ಚುವರಿ ಎಸ್ಪಿ ಪರಮೇಶ್ವರ್ ಹೆಗಡೆ, ಉಡುಪಿ ಡಿವೈಎಸ್ಪಿ ಪ್ರಭು ಉಪಸ್ಥಿತರಿದ್ದರು.

Oplus_131072