ಪರ್ಕಳ: ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ₹1.45 ಕೋಟಿ ಲಾಭ; ಸದಸ್ಯರಿಗೆ ಶೇ.10 ಡಿವಿಡೆಂಡ್ ಘೋಷಣೆ

ಪರ್ಕಳ: ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ. ಇದರ 20 ನೇ ವಾರ್ಷಿಕ ಮಹಾಸಭೆಯು ಮಣಿಪಾಲದ ನರಸಿಂಗೆ ಶ್ರೀ ನರಸಿಂಹ ಸಭಾಭವನದಲ್ಲಿ ಸೊಸೈಟಿಯ ಅಧ್ಯಕ್ಷರಾದ ಅಶೋಕ್ ಕಾಮತ್ ಕೊಡಂಗೆ ಇವರ ಅಧ್ಯಕ್ಷತೆಯಲ್ಲಿ ಭಾನುವಾರ ಜರಗಿತು.

2020-21 ರ ಸಾಲಿನ ಅಂತ್ಯಕ್ಕೆ ಪಾಲು ಬಂಡವಾಳ ರೂ 1.55 ಕೋಟಿ,ಠೇವಣಿ ರೂ 73.30 ಕೋಟಿ ಸಾಲಗಳು ರೂ 52.53 ಕೋಟಿ ಒಟ್ಟು ವ್ಯವಹಾರ 260 ಕೋಟಿ ನಡೆಸಿ ರೂ.1.45 ಕೋಟಿ ನಿವ್ವಳ ಲಾಭ ಗಳಿಸಿ, ಶೇ 10% ಲಾಭಾಂಶ ವಿತರಿಸಲಾಯಿತು.

ಆರ್.ಎಸ್.ಬಿ ಸಂಘ ಮಣಿಪಾಲ ಇದರ ವಿದ್ಯಾರ್ಥಿ ನಿಲಯಕ್ಕೆ ಅಡುಗೆ ಪರಿಕರಗಳನ್ನು ವಿತರಿಸಲಾಯಿತು. ಎಸ್ಸೆಸ್ಸೆಲ್ಸಿಯಲ್ಲಿ ಶೇ 90ಕ್ಕಿಂತ ಅಧಿಕ ಅಂಕಗಳಿಸಿದ ಮತ್ತು ಪಿ.ಯು.ಸಿ ಯಲ್ಲಿ ಶೇ 80ಕ್ಕಿಂತ ಅಧಿಕ ಅಂಕಗಳಿಸಿದ ಸದಸ್ಯರ ಮಕ್ಕಳನ್ನು ಗೌರವಿಸಲಾಯಿತು.

ಉಪಾಧ್ಯಕ್ಷರಾದ ಪಾಂಡುರಂಗ ಕಾಮತ್ ಸ್ವಾಗತಿಸಿ, ಮುಖ್ಯ ಕಾರ್ಯನಿರ್ವಣಾಧಿಕಾರಿ ನಿತ್ಯಾನಂದ ನರಸಿಂಗೆ ವರದಿ ಲೆಕ್ಕಪತ್ರ ಮಂಡಿಸಿದರು.
ಈ ವಿಂಶತಿ ಸಂಭ್ರಮದ ಪ್ರಯುಕ್ತ ಪ್ರಸಿದ್ಧ ಕಲಾವಿದರಿಂದ ಯಕ್ಷಗಾನ ಯಕ್ಷಲೋಕ ವಿಜಯ ಯಕ್ಷಗಾನ ಪ್ರದರ್ಶನಗೊಂಡಿತು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯು ಪುರಸ್ಕೃತ ತೀರ್ಥಹಳ್ಳಿ ಗೋಪಾಲ ಆಚಾರ್ಯ ಅವರನ್ನು ಸಂಸ್ಥೆಯ ವತಿಯಿಂದ ಪ್ರಪ್ರಥಮವಾಗಿ ಗೌರವಿಸಿ ಅಭಿನಂದಿಸಲಾಯಿತು.

ಸಂಸ್ಥೆಯ ನಿರ್ದೇಶಕರುಗಳಾದ ರಾಮಕೃಷ್ಣ ನಾಯಕ್ ಬಿ. ಪರ್ಕಳ, ಎನ್.ಸದಾನಂದ ನಾಯಕ್ ಹೆರ್ಗ, ನರಸಿಂಹ ನಾಯಕ್ ಮಣಿಪಾಲ, ಮಹೇಶ್ ನಾಯಕ್ ಅಂಬಲಬೆಟ್ಟು, ರವೀಂದ್ರ ಪಾಟ್ಕರ್ ಬಂಟಕಲ್ಲು, ಶ್ರೀ ವಿಜೇತ್ ಕುಮಾರ್ ಬೆಳ್ಳರ್ಪಾಡಿ, ಗಣಪತಿ ನಾಯಕ್ , ಪರ್ಕಳ ಗಣಪತಿ ಪ್ರಭು ಕುಕ್ಕೆಹಳ್ಳಿ, ಜಯಂತಿ ನಾಯಕ್ ಪರ್ಕಳ, ರೂಪ ನಾಯಕ್ ಪರ್ಕಳ ಉಪಸ್ಥಿತರಿದ್ದರು.
ಸುಧಾಕರ್ ನಾಯಕ್ ಮತ್ತು ನಾಗರಾಜ್ ನಾಯಕ್ ನಿರೂಪಿಸಿದರು. ನಿರ್ದೇಶಕ ನರಸಿಂಹ ನಾಯಕ್ ವಂದಿಸಿದರು.