ಉಡುಪಿಯಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಂದ ಪ್ರತಿಭಟನೆ

ಉಡುಪಿ: ಕೇಂದ್ರ ಸರ್ಕಾರವು ಲೈಂಗಿಕ ಅಲ್ಪಸಂಖ್ಯಾತರ ವ್ಯಕ್ತಿಗಳ ಹಕ್ಕುಗಳ ರಕ್ಷಣೆ ಮಸೂದೆ 2018 ಅನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿ ಆಶ್ರಯ ಸಮುದಾಯ ಹಾಗೂ ಸಂಗಮ ಸಂಸ್ಥೆಯ ನೇತೃತ್ವದಲ್ಲಿ ಲೈಂಗಿಕ ಅಲ್ಪಸಂಖ್ಯಾತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.  ಲೈಂಗಿಕ ಅಲ್ಪಸಂಖ್ಯಾತರ ವ್ಯಕ್ತಿಗಳ ಹಕ್ಕುಗಳ ರಕ್ಷಣೆ ಮಸೂದೆ ಹಾಗೂ ಮಾನವ ಕಳ್ಳ ಸಾಗಾಣಿಕೆ ತಡೆಗಟ್ಟುವಿಕೆ, ರಕ್ಷಣೆ ಹಾಗೂ ಪುನರ್‌ವಸತಿ ಬಿಲ್‌ಗಳನ್ನು ಲೈಂಗಿಕ ಅಲ್ಪಸಂಖ್ಯಾತರ ಸಲಹೆ ಪಡೆಯದೆ ಲೋಕಸಭೆಯಲ್ಲಿ ಮಂಡಿಸಲಾಗಿದೆ. ಈಗ ರಾಜ್ಯಸಭೆಯಲ್ಲಿ ಮಂಡಿಸುವುದು ಬಾಕಿ ಇದೆ. ಬಿಲ್‌ಗಳನ್ನು ರಾಜ್ಯಸಭೆಯಲ್ಲಿ ಮಂಡಿಸದೆ ರಾಜ್ಯಸಭೆಯ ವಿಶೇಷ ಸಮಿತಿಗೆ ವಹಿಸಬೇಕು […]

ಕುಂದಾಪುರ: ಕೇಂದ್ರದ ವಿಲೀನ ಪ್ರಕ್ರಿಯೆ ವಿರೋಧಿಸಿ ಬ್ಯಾಂಕ್ ನೌಕರರ ಪ್ರತಿಭಟನೆ

ಕುಂದಾಪುರ: ರಾಷ್ಟ್ರೀಕೃತ ಬ್ಯಾಂಕ್‌ಗಳಾದ ಬ್ಯಾಂಕ್ ಆಫ್ ಬರೋಡಾ, ವಿಜಯ ಬ್ಯಾಂಕ್ ಹಾಗೂ ದೇನಾ ಬ್ಯಾಂಕ್‌ಗಳನ್ನು ವಿಲೀನಗೊಳಿಸುವ ಕೇಂದ್ರ ಸರ್ಕಾರದ ಪ್ರಸ್ತಾವನೆ ವಿರೋಧಿಸಿ ಬ್ಯಾಂಕ್ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ಬುಧವಾರ ಕುಂದಾಪುರದ ಸಿಂಡಿಕೇಟ್ ಬ್ಯಾಂಕ್ ಮುಖ್ಯ ಶಾಖೆಯ ಬಳಿ ನಡೆಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಬ್ಯಾಂಕ್ ನೌಕರರ ಸಂಘಟನೆಯ ಅಧ್ಯಕ್ಷ ರಾಮ್ ಮೋಹನ್, ಬ್ಯಾಂಕ್‌ಗಳ ವಿಲೀನವನ್ನು ಕೇಂದ್ರ ಸರ್ಕಾರ ಕೂಡಲೇ ಕೈಬಿಡಬೇಕು. ಬ್ಯಾಂಕ್‌ಗಳ ವಿಲೀನದಿಂದ ಏನನ್ನೂ ಸಾಧಿಸಲಾಗದು ಎನ್ನುವುದು ಈಗಾಗಲೇ ಸಾಬೀತಾದರೂ ಕೂಡ ಸರ್ಕಾರದ ಈ ನಡೆ […]

ಹರ್ಕೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವ

ಕುಂದಾಪುರ: ಎಳೆಯ ಮಕ್ಕಳನ್ನು ಹೇಗೆ ಬೇಕಾದರೂ ಪಳಗಿಸಬಹುದು. ಅವರು ಸಾಕ್ಷಾತ್ ದೇವರಿದ್ದಂತೆ. ಶಾಲಾ ಮಕ್ಕಳು ದೇವರಿಗೆ ಸಮಾನ. ವಾರ್ಷಿಕೋತ್ಸವ ಹಾಗೂ ರಥೋತ್ಸವ ಸಮಾನವಾಗಿ ಕಾಣುತ್ತೇವೆ. ರಥೋತ್ಸವದಲ್ಲಿ ಒಂದೇ ದೇವರಿರುತ್ತಾರೆ. ಆದರೆ ವಾರ್ಷಿಕೋತ್ಸವದಲ್ಲಿ ಹಲವು ದೇವರನ್ನು ಕಾಣಬಹುದು ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಹೇಳಿದರು. ಅವರು ಮಂಗಳವಾರ ಕಟ್ಟಿನಮಕ್ಕಿಯ ಹರ್ಕೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳನ್ನು ಒಳ್ಳೆಯ ದಾರಿಯತ್ತ ಕೊಂಡೊಯ್ಯುವ ಕೆಲಸ ಶಿಕ್ಷಕರದ್ದು. ಶಿಕ್ಷಕರ […]

ಜಿಲ್ಲೆಯಾದ್ಯಂತ ಸಂಭ್ರಮ, ಸಡಗರದಿಂದ ಕ್ರಿಸ್ಮಸ್ ಆಚರಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕ್ರಿಸ್ಮಸ್ ಹಬ್ಬವನ್ನು ಮಂಗಳವಾರ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಉಡುಪಿ ಶೋಕಾಮಾತ ಇಗರ್ಜಿ, ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್, ಸಂತೆಕಟ್ಟೆ ಮೌಂಟ್ ರೋಸರಿ ಚರ್ಚ್, ಕಲ್ಮಾಡಿ ಸ್ಟೆಲ್ಲಾ ಮಾರಿಸ್ ಚರ್ಚ್, ಕೊಳಲಗಿರಿ ಸೆಕ್ರೇಡ್ ಹಾರ್ಟ್ ಚರ್ಚ್ ಮತ್ತು ಮೂಡುಬೆಳ್ಳೆ ಚರ್ಚ್ ಗಳಲ್ಲಿ  ಬೆಳಿಗ್ಗೆ ನೂರಾರು ಕ್ರೈಸ್ತ ಬಾಂಧವರು ವಿಶೇಷ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಹಬ್ಬದ ಶುಭಾಶಯವನ್ನು ವಿನಿಮಯ ಮಾಡಿಕೊಂಡರು. ಯೇಸುವಿನ ಜನ್ಮದಿನದ ಪ್ರಯುಕ್ತ ಮಾಡಿದ್ದ ಗೋದಲಿ ಹಾಗೂ ಪುಟ್ಟ ಗೊಂಬೆಗಳ ಪ್ರದರ್ಶನ ಜನರನ್ನು ಆಕರ್ಷಿಸುತ್ತಿತ್ತು. ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ […]