ಪ್ರಯಾಗದ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪ್ರಧಾನಿ ಮೋದಿ

ಪ್ರಯಾಗರಾಜ್: ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬಿಡುವಿಲ್ಲದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕುಂಭಮೇಳದಲ್ಲಿ ಭಾಗವಹಿಸಿ ಗಂಗಾನದಿಗೆ ಗಂಗಾರತಿ ಮಾಡಿದ ಪ್ರಧಾನಿ ಮೋದಿ, ಪೌರ ಕಾರ್ಮಿಕರ ಪಾದತೊಳೆದದ್ದು ವಿಶೇಷವಾಗಿತ್ತು. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೊತೆಗೆ ಆಗಮಿಸಿದ ಮೋದಿ, ಗಂಗಾ ನದಿಯಲ್ಲಿ ಪುಣ್ಯಸ್ನಾನವನ್ನೂ ಮಾಡಿದರು. ಇದಾದ ನಂತರ ಸಂಗಂ ಘಾಟ್ ನಲ್ಲಿ ಗಂಗಾನದಿಗೆ ಪೂಜೆ ಸಲ್ಲಿಸಿದರು. ಇದಾದ ನಂತರ ಓರ್ವ ಮಹಿಳೆಯೂ ಸೇರಿದಂತೆ ಪೌರ ಕಾರ್ಮಿಕರ ಪಾದವನ್ನು ಪ್ರಧಾನಿ ತೊಳೆದರು. ತನ್ನ ಪಾದವನ್ನು ತೊಳೆದ ಬಗ್ಗೆ ಮಹಿಳೆ ಪ್ರತಿಕ್ರಿಯಿಸಿ, ಇದು […]

ಜೈಲಿನಲ್ಲಿರುವ ಜಿ.ಪಂ ಸದಸ್ಯನನ್ನು ನೆನೆದ ಸಂಸದೆ!: ಆಕ್ರೋಶ: ಆಡಿಯೋ ವೈರಲ್

ಕುಂದಾಪುರ: ಭಾನುವಾರ  ಕೋಟದಲ್ಲಿ  ನಡೆದ ಉದ್ಯೋಗಮೇಳ  ಕಾರ್ಯಕ್ರಮದಲ್ಲಿ ಮಾರ್ಗಸೂಚಿ ಪ್ರಕಾರ ಭರವಸೆ ಕಾರ್ಯಕ್ರಮಕ್ಕೆ ಉಸ್ತುವಾರಿ ಸಚಿವರು ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರು, ಸ್ಥಳೀಯ ಜಿ.ಪಂ, ತಾ.ಪಂ ಸದಸ್ಯರನ್ನು ಆಹ್ವಾನಿಸಲಾಗಿದ್ದು, ಆಮಂತ್ರಣ ಪತ್ರಿಕೆಯಲ್ಲೂ ಹೆಸರುಗಳನ್ನು ಮುದ್ರಿಸಲಾಗಿತ್ತು. ಸಂಸದೆ ಶೋಭಾ ಕರಂದ್ಲಾಜೆ ತಮ್ಮ ಉದ್ಘಾಟನಾ ಭಾಷಣದ ಆರಂಭದಲ್ಲಿ ವೇದಿಕೆಯಲ್ಲಿರುವ ಜನಪ್ರತಿನಿಧಿಗಳ ಹೆಸರು ಹೇಳುತ್ತಾ ಕೋಟ ಅವಳಿ ಕೊಲೆ ಪ್ರಕರಣ ಆರೋಪದಲ್ಲಿ ಜೈಲು ಪಾಲಾಗಿರುವ ಕೋಟ ಜಿ.ಪಂ ಸದಸ್ಯ ರಾಘವೇಂದ್ರ ಬಾರಿಕೆರೆ ಹೆಸರನ್ನು ಪ್ರಸ್ತಾಪಿಸಿದರು. ಇದೀಗ ಸಂಸದೆ ಶೋಭಾ ಮಾತನಾಡಿರುವ ಆಡಿಯೋ […]

ಸರ್ಕಾರಿ ಕಾರ್ಯಕ್ರಮದಲ್ಲಿ ಸಂಸದೆಯಿಂದ ರಾಜಕೀಯ ಹೇಳಿಕೆ!

ಕುಂದಾಪುರ:ಸಂಸದೆ ಶೋಭಾ ಕರಂದ್ಲಾಜೆಯವರು ಉದ್ಯೋಗ ಮೇಳದ ಉದ್ಘಾಟನಾ ಕಾರ್ಯಕ್ರಮದ ಸಭಾ ವೇದಿಕೆಯಲ್ಲಿ ರಾಜಕೀಯ ಹೇಳಿಕೆಗಳನ್ನು ನೀಡಿ ಆಕ್ರೋಶಗೊಂಡರು. ತಮ್ಮ ವಿರುದ್ದ ಅಪಪ್ರಚಾರ ಮಾಡಿ ಶೋಭಾ ಗೋ ಬ್ಯಾಕ್ ಅಭಿಯಾನ ಮಾಡುತ್ತಿರುವ ತಮ್ಮದೇ ಪಕ್ಷದ ಯುವ ಕಾರ್ಯಕರ್ತರ ವಿರುದ್ದ ಆಕ್ರೋಶ ಮಾತುಗಳನ್ನಾಡಿದರು. ಅಲ್ಲದೇ ಚುನಾವಣಾ ಪ್ರಚಾರದ ಭಾಷಣ ಮಾಡುವ ರೀತಿಯಲ್ಲಿ ತಮ್ಮ ಅವಧಿಯಲ್ಲಾದ ಅಭಿವೃದ್ದಿ ಕಾರ್ಯಗಳ ಪಟ್ಟಿಗಳನ್ನು ವೇದಿಕೆಯ ಮುಂಭಾಗದಲ್ಲಿದ್ದ ಉದ್ಯೋಗಾಕಾಂಕ್ಷಿಗಳ ಮುಂದಿಡುತ್ತಾ ಹೋದರು. ತಾನು ಮಾಡಿದಷ್ಟು ಅಭಿವೃದ್ದಿ ಕಾರ್ಯ ಯಾವ ಗಂಡಸು ಮಾಡಿಲ್ಲವೆಂದು ಪರೋಕ್ಷವಾಗಿ ಮಾಜಿ ಸಂಸದ, […]

ಉಡುಪಿ ಜಿಲ್ಲೆಯಲ್ಲಿ ಯುವಜನತೆ ಉದ್ಯೋಗ ಪಡೆಯಲು ಪೂರಕ ವಾತಾವರಣವಿದೆ :ಸಂಸದೆ ಶೋಭಾ

ಕುಂದಾಪುರ: ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರದಿಂದ ದೊರೆಯಬಹುದಾದ ಎಲ್ಲಾ ರೀತಿಯ ಸೌಲಭ್ಯಗಳನ್ನು ಉಡುಪಿ ಜಿಲ್ಲೆಗೆ ಒದಗಿಸಿದ್ದು, ಯುವಜನತೆ ಉದ್ಯೋಗ ಪಡೆಯಲು ಎಲ್ಲಾ ರೀತಿಯ ಪೂರಕ ವಾತಾವರಣ ಜಿಲ್ಲೆಯಲ್ಲಿದ್ದು, ಯುವ ಜನತೆ ಇದರ ಸದುಪಯೋಗ ಪಡೆಯುವಂತೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಅವರು ಭಾನುವಾರ ಕೋಟ ವಿವೇಕ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃಧ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ […]

ನಾನು ಮಾಡಿದಷ್ಟು ಅಭಿವೃದ್ದಿ ಯಾವ ಗಂಡಸು ಮಾಡಿಲ್ಲ: ಸಂಸದೆ ಶೋಭಾ

ಕುಂದಾಪುರ: ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭಿವೃದ್ದಿ ವಿಚಾರದಲ್ಲಿ ಯಾವ ಗಂಡಸು ಮಾಡದ ಅಭಿವೃದ್ದಿ ಕೆಲಸಗಳನ್ನು ನಾನು ಮಾಡಿದ್ದೇನೆ. ಸಂಸದೆಯಾಗಿ ಕ್ಷೇತ್ರಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡಿದ್ದೇನೆ. ಹೆಣ್ಣು ಮಕ್ಕಳು ಕೆಲಸವನ್ನು ನಿಯತ್ತು, ಪ್ರಾಮಾಣಿಕವಾಗಿ ಮಾಡುತ್ತಾರೆ. ಈ ಬಾರಿ ಚುನಾವಣೆಯ ಟಿಕೆಟ್ ಆಕಾಂಕ್ಷಿಗಳು ಕೆಲವರು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಅದಕ್ಕೆಲ್ಲಾ ನಾನು ಹೆದರಲ್ಲ, ದೃತಿಗೆಡಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಪರೋಕ್ಷವಾಗಿ ಜಯಪ್ರಕಾಶ್ ಹೆಗ್ಡೆ ಕಾಲೆಳೆದಿದ್ದಾರೆ. ಕೋಟದಲ್ಲಿ ನಡೆದ ಜಿಲ್ಲಾಮಟ್ಟದ ಉದ್ಯೋಗ ಮೇಳ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜೊತೆ […]