ಲೋಕಸಭಾ ಚುನಾವಣೆ: ಮತದಾರರ ಗುರುತಿನ ಚೀಟಿ ಬದಲಿಗೆ ಪರಿಗಣಿಸುವ ಇನ್ನಿತರ ದಾಖಲೆಗಳು

ಉಡುಪಿ: ಲೋಕಸಭಾ ಚುನಾವಣೆಯಲ್ಲಿ ಮತದಾರರು ಮತದಾನಕ್ಕೆ ತೆರಳುವಾಗ ಭಾರತ ಚುನಾವಣಾ ಆಯೋಗವು ನೀಡಿದ ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿ(ಎಪಿಕ್)ಯನ್ನು ತೋರಿಸಿ ಮತದಾನ ಮಾಡುವಂತೆ ತಿಳಿಸಲಾಗಿದ್ದು, ಒಂದು ವೇಳೆ ಗುರುತಿನ ಚೀಟಿ(ಎಪಿಕ್) ಹಾಜರುಪಡಿಸಲು ಅಸಾಧ್ಯವಾದಲ್ಲಿ ಮತದಾನದ ಗುರುತಿನ ಚೀಟಿ (ಎಪಿಕ್ ಕಾರ್ಡ್ ) ಬದಲು ಈ ಕೆಳಗಿನ 11 ವಿವಿಧ ಬಗೆಯ ದಾಖಲಾತಿಗಳ ಪೈಕಿ ಯಾವುದಾದರೂ ಒಂದು ದಾಖಲಾತಿಯನ್ನು ಹಾಜರು ಪಡಿಸಿ ಮತದಾನ ಮಾಡಲು ಭಾರತ ಚುನಾವಣಾ ಆಯೋಗ ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದೆ. ಪಾಸ್‍ಪೋರ್ಟ್, ಚಾಲನಾ ಪರವಾನಿಗೆ, […]

ಸಂಚಾರಿ ನಿಯಮ ಪಾಲನೆ ಪರಿಶೀಲನೆಗೆ ತಂಡ ರಚನೆ: ಜಿಲ್ಲಾಧಿಕಾರಿ

ಉಡುಪಿ: ಜಿಲ್ಲೆಯಲ್ಲಿ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವಿಕೆ, ಕಾರು ಚಾಲಕರು ಸೀಟ್ ಬೆಲ್ಟ್ ಧರಿಸುವಿಕೆ, ಚಾಲನಾ ಸಮಯದಲ್ಲಿ ಮೊಬೈಲ್ ಬಳಕೆ, ರೋಡ್‍ಕ್ರಾಸ್ ಮಾಡುವಾಗ ಪಾಲಿಸಬೇಕಾದ ನಿಯಮಗಳು ಸೇರಿದಂತೆ ಸಂಚಾರಿ ನಿಯಮಗಳ ಸಮರ್ಪಕ ಪಾಲನೆ ಕುರಿತಂತೆ ಪರಿಶೀಲಿಸಲು, ಎಪ್ರಿಲ್ ನಿಂದ 9 ತಿಂಗಳುಗಳ ಕಾಲ ಪರಿಶೀಲನೆಗೆ 9 ತಂಡಗಳನ್ನು ರಚಿಸಲಾಗಿದ್ದು, ಪ್ರತಿ ತಿಂಗಳು 1 ತಂಡ ಕಾರ್ಯ ನಿರ್ವಹಿಸಲಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಹೇಳಿದರು. ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಉಡುಪಿ ಜಿಲ್ಲಾ ರಸ್ತೆ […]

ಎಸ್.ಎಸ್.ಎಲ್.ಸಿ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಉಡುಪಿ: ಉಡುಪಿ ಜಿಲ್ಲೆಯ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯು ನಡೆಯಲಿದ್ದು, ಪರೀಕ್ಷೆಯು ಸುಸೂತ್ರವಾಗಿ ಮತ್ತು ದೋಷ ರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ಮತ್ತು ಕಿಡಿಗೇಡಿಗಳು ಪರೀಕ್ಷಾ ಕೇಂದ್ರದ ಪರಿಸರವನ್ನು ಕಲುಷಿತಗೊಳಿಸದಂತೆ ನಿಗಧಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಪರೀಕ್ಷೆಗಳು ನಡೆಯುವ ದಿನಗಳಂದು ಬೆಳಗ್ಗೆ 8 ರಿಂದ ರಾತ್ರಿ 6 ರ ವರೆಗೆ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲೂ ಹಾಗೂ ಸುತ್ತಲೂ […]

4 ವಿಶ್ವದಾಖಲೆಗಳ ಸರದಾರಿಣಿ:ತನುಶ್ರೀ ಪಿತ್ರೋಡಿ

ಕಳೆದ ತಿಂಗಳಿನಲ್ಲಿ ಉಡುಪಿಯ ಸೈಂಟ್ ಸಿಸಿಲಿಸ್ ವಿದ್ಯಾಸಂಸ್ಥೆಯ ಕ್ರೀಡಾಂಗಣದ ಏಕಕಾಲದಲ್ಲಿ 2 ವಿಶ್ವದಾಖಲೆಗೆ ಸಾಕ್ಷಿಯಾಯಿತು.ಸಾವಿರಾರು ಪ್ರೇಕ್ಷಕರ ಈ ಅಸಾಧಾರಣ 10 ರ ಪೋರಿ ತನುಶ್ರೀ ಪಿತ್ರೋಡಿಯ ಪ್ರದರ್ಶನ ನೋಡಿ ಬೆಕ್ಕಸಬೆರಗಾದರು. ತನುಶ್ರೀ ಸಾಹಸಗಾಥೆಯ ಕಿರು ಪರಿಚಯ: ನೃತ್ಯ ಹಾಗೂ ಯೋಗ ಸಾಧನೆಯ ಮೂಲಕ ವಿಶ್ವವನ್ನೇ ಗಮನ ಸೆಳೆದ ಬಹುಮುಖಪ್ರತಿಭೆಯ,ವಿಶ್ವದಾಖಲೆಗಳ ಸರದಾರಿಣಿ,ನಾಟ್ಯ ಮಯೂರಿ ಬಿರುದಾಂಕಿತೆ ತನುಶ್ರೀ ಪಿತ್ರೋಡಿ  ಅವರು  ಸಂಧ್ಯಾ,ಉದಯ್ ಕುಮಾರ್ ದಂಪತಿ ಪುತ್ರಿ .ಪ್ರಸ್ತುತ ಸೈಂಟ್ ಸಿಸಿಲಿಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ 5 ನೇ ತರಗತಿಯಲ್ಲಿ ಕಲಿಯುತ್ತಿರುವ ತನುಶ್ರೀ […]