ಉಡುಪಿ ‘ಭಾರತ್‌ ಮಾರ್ಕೆಟಿಂಗ್‌’ ಬೃಹತ್‌ ಸಾಮಗ್ರಿಗಳ ಜಿ.ಎಂ.ಬ್ರ್ಯಾಂಡ್‌ ಶೋರೂಂ ಉದ್ಘಾಟನೆ

ಉಡುಪಿ: ಉಡುಪಿ ಬನ್ನಂಜೆ ನಾರಾಯಣಗುರು ಸಂಕೀರ್ಣಕ್ಕೆ ಸ್ಥಳಾಂತರಗೊಂಡ ಭಾರತ್‌ ಮಾರ್ಕೆಟಿಂಗ್‌ ಸಂಸ್ಥೆಯ ಅತ್ಯಾಧುನಿಕ ಬೃಹತ್‌ ಸಂಗ್ರಹದ ವಿದ್ಯುತ್‌ ಜೋಡಣೆ ಸಾಮಗ್ರಿಗಳ ಜಿ.ಎಂ.ಬ್ರ್ಯಾಂಡ್‌ ಶೋರೂಂ ಅನ್ನು ಜಿ.ಎಂ. ಮಾಡ್ಯುಲರ್‌ನ ಬ್ರ್ಯಾಂಡ್‌ ರಾಯಭಾರಿ ಬಾಲಿವುಡ್‌ ನಟ ಸುನಿಲ್‌ ಶೆಟ್ಟಿ ಶುಕ್ರವಾರ ಉದ್ಘಾಟಿಸಿದರು.  ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಿ.ಎಂ. ಬ್ರ್ಯಾಂಡ್‌ನ ಉತ್ಪನ್ನಗಳು ಹೆಸರುವಾಸಿಯಾಗಿದೆ. ಇಲ್ಲಿ ಉತ್ತಮ ಗುಣಮಟ್ಟದ ವಿವಿಧ ಉತ್ಪನ್ನಗಳಿವೆ. ಅಲ್ಲದೆ, ಗ್ರಾಹಕರ ವಿಶ್ವಾಸಗಳಿಸುವಲ್ಲಿಯೂ ಇದು ಯಶಸ್ವಿಯಾಗಿದೆ,  ಜಿ.ಎಂ. ಸಂಸ್ಥೆಯ ಯಾವುದೇ ಕಾರ್ಯಕ್ರಮಕ್ಕೂ ಕಲಾವಿದನಾಗಿ ಹೋಗುವುದಿಲ್ಲ. ಅದರ ಕುಟುಂಬ ಸದಸ್ಯನಾಗಿ […]

ಪಟ ಪಟ ಹಾರೋ ಗಾಳಿಪಟ ಹೇಳಿತು ಮತದಾನದ ಸಂದೇಶ !

ಉಡುಪಿ: ಶನಿವಾರ ಸಂಜೆ ಮಲ್ಪೆಯ ಕಡಲತೀರದಲ್ಲಿ  ವಿಹರಿಸಲು ಬಂದವರಿಗೆ ಆಶ್ಚರ್ಯ ಕಾದಿತ್ತು,  ಕಡಲತೀರದಲ್ಲಿ ಅಂಗವಿಕಲರ ಬೈಕ್ ಜಾಥಾ, ಅಂಗವಿಕಲ ಮಕ್ಕಳ ಆಕರ್ಷಕ ಸಾಂಸ್ಕøತಿಕ ಕಾರ್ಯಕ್ರಮ, ಮೇಲೆ ನೋಡಿದರೆ ಬಾನಂಗಳದಲ್ಲಿ ಮತದಾನ ಸಂದೇಶ ಸಾರುವ ಅತ್ಯಾಕರ್ಷಕ ಗಾಳಿಪಟಗಳ ಹಾರಾಟ, ನೆರೆದಿದ್ದ ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಮೂಡಿಸಿದವು. ಉಡುಪಿ ಜಿಲ್ಲಾ ಸ್ವೀಪ್ ಸಮಿತಿ ಮತ್ತು ಮಲ್ಪೆ ಬೀಚ್ ಅಭಿವೃಧ್ದಿ ಸಮಿತಿ ಸಹಯೋಗದಲ್ಲಿ ನಡೆದ ಮತದಾನ ಜಾಗೃತಿ ಮೂಡಿಸುವ ಸ್ವೀಪ್ ಕಾರ್ಯಕ್ರಮದಲ್ಲಿ , ಜಿಲ್ಲೆಯ ವಿವಿಧ ಕಡೆಗಳಿಂದ ಬಂದಿದ್ದ ವಿಕಲಚೇತನರು, ಮತದಾನ […]

ಹಿರಿಯಡ್ಕ :ಮಹಿಳಾ ಸಬಲೀಕರಣ, ಆತ್ಮೀಯ ಸಮ್ಮಿಲನ ಕಾರ್ಯಕ್ರಮ

ಉಡುಪಿ : ಹಿರಿಯಡಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಲೇಖಕಿಯರ ಸಂಘದ ಸಹಯೋಗದಲ್ಲಿ ಮಹಿಳಾ ಸಬಲೀಕರಣ, ವಿಚಾರ ಸಂಕಿರಣ, ಸಂವಾದ ಮತ್ತು ಆತ್ಮೀಯ ಸಮ್ಮಿಲನ ಕಾರ್ಯಕ್ರಮವು ನಡೆಯಿತು. ಕಾಲೇಜಿನ ಪ್ರಾಂಶುಪಾಲೆ ಮತ್ತು ಉಡುಪಿ ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷೆ ಡಾ. ನಿಕೇತನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮಾತನಾಡಿ, ಕಾಲೇಜಿನ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿಯೇ ಮಹಿಳೆಯರ ಬಗ್ಗೆ ಗೌರವ ಮತ್ತು ಸಂವೇದನಾ ಶೀಲತೆಯನ್ನು ಬೆಳೆಸಿಕೊಂಡು ಸೌಹಾರ್ದಯುತ ಸಮಾಜ ನಿರ್ಮಿಸಲು […]

ಚುನಾವಣೆಯನ್ನು ಹಬ್ಬದಂತೆ ಆಚರಿಸಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ : ಸಮಾನತೆ ಚಿಹ್ನೆ ಆಗಿರುವ ಮತದಾನವನ್ನು ಹಬ್ಬದಂತೆ ಆಚರಿಸಬೇಕು. ಮತದಾನದ ಜಾಗೃತಿಗಾಗಿ ಆಯೋಜಿಸಿದ ಕಾರ್ಯಕ್ರಮಗಳಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಮತದಾರರಿಗೆ ಹೇಳಿದರು. ಅವರು ಶನಿವಾರ ಬ್ರಹ್ಮಗಿರಿಯ ಬಾಲಭವನದಲ್ಲಿ, ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಡೆದ ವಿಕಲಚೇತನ ಮತದಾರರಿಗೆ ಮತದಾನದ ಅರಿವು ಮೂಡಿಸುವ  ಕಾರ್ಯಕ್ರಮದಲ್ಲಿ ಮಾತನಾಡಿದರು.  ಹಿಂದಿನ ಚುನಾವಣೆಯಲ್ಲಿ ಮತ ಚಲಾಯಿಸದೆ ಹೊರಗುಳಿದಿರುವವರನ್ನು ಗುರುತಿಸಿ ಅವರಿಗೆ ಮನವರಿಕೆ ಮಾಡಿ ಈ ಬಾರಿ ಮತಚಲಾಯಿಸುವಂತೆ ಮತದಾನದ ಬಗ್ಗೆ […]

ಏ.1 ರಿಂದ 30 : ಆಗುಂಬೆ ಘಾಟಿ ಬಂದ್, ಉಡುಪಿ ಜಿಲ್ಲಾಧಿಕಾರಿ ಆದೇಶ

ಉಡುಪಿ :ರಾಷ್ಟ್ರೀಯ ಹೆದ್ದಾರಿ 169 ಎ ರ ಆಗುಂಬೆ ಘಾಟ್ ಭಾಗದಲ್ಲಿ ಶಾಶ್ವತ ದುರಸ್ಥಿಗೊಳಿಸಲು ಏ. 1 ರಿಂದ 30 ರ ವರೆಗೆ ಘಾಟ್ ರಸ್ತೆಯ ಮೂಲಕ ಹಾದು ಹೋಗುವ ರಸ್ತೆ ಸಂಚಾರವನ್ನು ಸಂಪೂರ್ಣ ಬಂದ್ ಮಾಡಲು ಹಾಗೂ ಆ ಅವಧಿಯಲ್ಲಿ ಸಂಚರಿಸುವ ಲಘು ವಾಹನಗಳಾದ ಸಾಮಾನ್ಯ ಬಸ್ಸ್‍ಗಳು, ಜೀಪು, ವ್ಯಾನ್, ಎಲ್.ಸಿ.ವಿ (ಮಿನಿ ವ್ಯಾನ್), ದ್ವಿಚಕ್ರ ವಾಹನಗಳು, ಉಡುಪಿ- ಕಾರ್ಕಳ- ಮಾಳ- ಶೃಂಗೇರಿ-ಕೊಪ್ಪ-ತೀರ್ಥಹಳ್ಳಿ (ರಾಷ್ಟ್ರೀಯ ಹೆದ್ದಾರಿ 169) ಮಾರ್ಗದಲ್ಲಿ ಸಂಚರಿಸುವಂತೆ ಹಾಗೂ ಭಾರಿ ವಾಹನಗಳಾದ ರಾಜಹಂಸ, […]