ಕುಂದಾಪುರ: ಆಸ್ತಿ ತೆರಿಗೆ ಪಾವತಿಸಲು ಸೂಚನೆ

ಉಡುಪಿ : ಕುಂದಾಪುರ ಪುರಸಭಾ ವ್ಯಾಪ್ತಿಯ ಎಲ್ಲಾ ವಾಸ್ತವ್ಯ ಮತ್ತು ವಾಣಿಜ್ಯ ಕಟ್ಟಡಗಳ ಮಾಲಕರು ತಮ್ಮ ಕಟ್ಟಡಗಳ 2019-20 ನೇ ಸಾಲಿನ ಆಸ್ತಿ ತೆರಿಗೆಯನ್ನು ಏಪ್ರಿಲ್ 30 ರ ಒಳಗೆ ಪಾವತಿಸಿ, ಆಸ್ತಿ ತೆರಿಗೆ ಮೇಲೆ ಶೇ.5 ರಿಯಾಯಿತಿ ಪಡೆಯಬಹುದಾಗಿದೆ. ಜೂನ್ 30 ರ ತನಕ ಬಡ್ಡಿ ರಹಿತವಾಗಿ ಆಸ್ತಿ ತೆರಿಗೆ ಪಾವತಿಸಲು ಕೊನೆಯ ದಿನವಾಗಿರುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಜುಲೈ 1 ರ ನಂತರ ಆಸ್ತಿ ತೆರಿಗೆ ಪಾವತಿಸಿದ್ದಲ್ಲಿ ತಿಂಗಳಿಗೆ ಶೇ. 2 […]

ಕುಂದಾಪುರ: ಇವಿಎಂ ಮತಯಂತ್ರಗಳಿಗೆ ಕ್ಯಾಂಡಿಡೇಟ್ ಸೆಟ್ಟಿಂಗ್

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳ ಕ್ಯಾಂಡಿಡೇಟ್ ಸೆಟ್ಟಿಂಗ್ ಕಾರ್ಯವನ್ನು ಸಹಾಯಕ ಚುನಾವಣಾಧಿಕಾರಿಗಳು ಕುಂದಾಪುರ ವಿಧಾನಸಭಾ ಕ್ಷೇತ್ರ ಇವರ ಮಾರ್ಗದರ್ಶನದಲ್ಲಿ ಬುಧವಾರ ಭಂಡಾರಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಕುಂದಾಪುರ ಇಲ್ಲಿ ವಿವಿಧ ರಾಜಕೀಯ ಪಕ್ಷಗಳ ಏಜೆಂಟ್ ಸಮ್ಮುಖದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರಕ್ಕೆ ಅಗತ್ಯವಿರುವ 222 ಮತಗಟ್ಟೆಗಳಿಗೆ ಹಾಗೂ ಹೆಚ್ಚುವರಿಯಾಗಿ ಇವಿಎಂ ಮತಯಂತ್ರಗಳಿಗೆ ಕ್ಯಾಂಡಿಡೇಟ್ ಸೆಟ್ಟಿಂಗ್ ಬಗ್ಗೆ 26 ಸೆಕ್ಟರ್ ಅಧಿಕಾರಿಗಳು / ಮೇಲ್ವಿಚಾರಕರ ನೇತೃತ್ವದಲ್ಲಿ 26 ಟೇಬಲ್‍ಗಳಲ್ಲಿ ತಲಾ 10 ಸುತ್ತುಗಳಲ್ಲಿ […]

ಉಡುಪಿ: ದೇವರ ದಾಸಿಮಯ್ಯ ಜಯಂತಿ ಆಚರಣೆ

ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದಲ್ಲಿ , ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದೇವರ ದಾಸಿಮಯ್ಯ ಜಯಂತಿ ಆಚರಣೆಯನ್ನು ಬುಧವಾರ ಆಚರಿಸಲಾಯಿತು. ಚುನಾವಣಾ ನೀತಿ ಸಂಹಿತೆ ಪ್ರಯುಕ್ತ ಸರಳವಾಗಿ ಆಚರಿಸಿದ ದೇವರ ದಾಸಿಮಯ್ಯ ದಿನಾಚರಣೆಯನ್ನು , ಜಿಲ್ಲಾ ಪಂಚಾಯತ್ ಸಿಇಓ ಸಿಂಧೂ ಬಿ ರೂಪೇಶ್ ಉದ್ಘಾಟಿಸಿದರು.  ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಎಸ್.ಪಿ. ನಿಷಾ ಜೇಮ್ಸ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.  ಕನ್ನಡ ಮತ್ತು ಸಂಸ್ಕøತಿ ಇಲಾಖೆಯ […]