ನೌಕಾಪಡೆ ತನ್ನ ತಪ್ಪನ್ನು ಒಪ್ಪಿಕೊಂಡು ಕ್ಷಮೆಯಾಚಿಸದಿದ್ದರೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಿದ್ಧ: ಪ್ರಮೋದ್ ಮಧ್ವರಾಜ್

ಉಡುಪಿ: ನೌಕಾಪಡೆ ಮೀನುಗಾರರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಿ ತನ್ನ ತಪ್ಪನ್ನು ಒಪ್ಪಿಕೊಂಡು ಕ್ಷಮೆಯಾಚಿಸದಿದ್ದರೆ  ಸುಪ್ರಿಂ ಕೋರ್ಟ್ ಮೆಟ್ಟಿಲೇರಲು ಸಿದ್ದ. ಮಾತ್ರವಲ್ಲದೆ ಅಗತ್ಯ ಬಿದ್ದರೆ ರಕ್ಷಣಾ ಸಚಿವೆ ನಿರ್ಮಲಾ ಸೀತರಾಮನ್ ವಿರುದ್ದವೂ ಪ್ರಕರಣ ದಾಖಲಿಸುತ್ತೇನೆ ಎಂದು ಸಚಿವ ಪ್ರಮೋದ್ ಮಧ್ವರಾಜ್ ಎಚ್ಚರಿಕೆ ನೀಡಿದರು..  ಇಂದು ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‌ ನೌಕಾಪಡೆಯ ಐಎನ್‌ಎಸ್‌ ಕೊಚ್ಚಿನ್‌ ಹಡಗು ಡಿಕ್ಕಿ ಹೊಡೆದ ಪರಿಣಾಮವೇ ಸುವರ್ಣ ತ್ರಿಭುಜ ಬೋಟ್‌ ಸಮುದ್ರದಲ್ಲಿ ಮುಳುಗಿದ್ದು. ಆದರೆ ಚುನಾವಣೆಯ ಹಿನ್ನೆಲೆಯಲ್ಲಿ ಇದನ್ನು ಮುಚ್ಚಿಡಲಾಗಿದೆ. ನೌಕಾಸೇನೆಯವರು ಮೃತ […]