ಉಡುಪಿ: ಮತ ಎಣಿಕೆಯ ದಿನ ಸಿಡಿಮದ್ದು, ಮದ್ಯ ಮಾರಾಟ ನಿಷೇಧ

ಉಡುಪಿ, :ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆಯು ಮೇ 23 ರಂದು ನಡೆಯಲಿದ್ದು, ಈ ಸಂದರ್ಭದಲ್ಲಿ ಜಿಲ್ಲೆಯ ಸಾರ್ವಜನಿಕ ಹಿತದೃಷ್ಟಿಯಿಂದ, ಕಾನೂನು ಸುವ್ಯವಸ್ಥೆ, ಶಾಂತಿಪಾಲನೆ ಕಾಪಾಡುವ ನಿಟ್ಟಿನಲ್ಲಿ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗಿದೆ   ಮತ ಎಣಿಕೆಯ ಫಲಿತಾಂಶದ ವಿಜಯೋತ್ಸವದ ಸಮಯದಲ್ಲಿ ಪಟಾಕಿ/ ಸಿಡಿಮದ್ದು ಸಿಡಿಸುವುದನ್ನು ತಡೆಗಟ್ಟುವ ಸಲುವಾಗಿ ಅವುಗಳ ಮಾರಾಟವನ್ನು ನಿಷೇಧಿಸುವುದು ಅಗತ್ಯವೆಂದು ಮನಗಂಡು, ಮೇ 22 ರಂದು ಬೆಳಗ್ಗೆ 10 ಗಂಟೆಯಿಂದ ಮೇ 24 ರ ಸಂಜೆ 5 ಗಂಟೆಯವರೆಗೆ ಜಿಲ್ಲೆಯಾದ್ಯಂತ ಯಾವುದೇ ರೀತಿಯ […]

ಮತ ಎಣಿಕೆ ಸಮಯದಲ್ಲಿ ಗೊಂದಲ ಬೇಡ- ಉಡುಪಿ ಜಿಲ್ಲಾಧಿಕಾರಿ

ಉಡುಪಿ : ಮೇ 23 ರಂದು ಉಡುಪಿಯ ಸೈಂಟ್ ಸಿಸಿಲಿ ಶಾಲೆಯಲ್ಲಿ ನಡೆಯುವ,  ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು, ಮತ ಎಣಿಕೆ ಸಂದರ್ಭದಲ್ಲಿ ಯಾವುದೇ ಒತ್ತಡ ಅಥವಾ ಗೊಂದಲಕ್ಕೆ ಒಳಗಾಗದಂತೆ, ಚುನಾವಣಾ ಆಯೋಗ ಸೂಚಿಸಿರುವ ಮಾರ್ಗಸೂಚಿಯನ್ವಯ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.  ಅವರು ಶುಕ್ರವಾರ, ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಮತ ಎಣಿಕೆ ಕಾರ್ಯ ನಿಯೋಜನೆಗೊಂಡಿರುವ ಸಿಬ್ಬಂದಿಗಳಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ […]

ಕುಂದಾಪುರ:ಟಿಪ್ಪರ್‌ನೊಳಗಿದ್ದ ಕಲ್ಲುಬಂಡೆ ರಸ್ತೆಗೆ: ತಪ್ಪಿತು ಭಾರೀ ದುರಂತ!

ಕುಂದಾಪುರ: ಬೃಹತ್ ಗಾತ್ರದ ಕಲ್ಲುಬಂಡೆಗಳನ್ನು ಹೊತ್ತು ಸಾಗುತ್ತಿದ್ದ ಟಿಪ್ಪರ್‌ನಿಂದ ಕಲ್ಲುಗಳು ರಸ್ತೆ ಮಧ್ಯೆ ಬಿದ್ದ ಪರಿಣಾಮ ಕೆಲಕಾಲ ವಾಹನ ಸಂಚಾರಕ್ಕೆ ತೊಡಕುಂಟಾದ ಘಟನೆ ಹೆಮ್ಮಾಡಿಯ ಲಕ್ಷ್ಮೀ ಹೊಟೇಲ್ ಎದುರುಗಡೆಯ ರಾಷ್ಟ್ರೀಯ ಹೆದ್ದಾರಿ-೬೬ ರಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಇಲ್ಲಿನ ಸಮುದ್ರತೀರದಲ್ಲಿ ಕಡಲ್ಕೊರೆತ ತಡೆಗಾಗಿ ಬಂಡೆಕಲ್ಲುಗಳನ್ನು ಹಾಸುವ ಕಾಮಗಾರಿ ನಡೆಯುತ್ತಿದ್ದು ಕಡಲತೀರಕ್ಕೆ ಬಂಡೆಕಲ್ಲುಗಳನ್ನು ಸಾಗಾಟ ಮಾಡುವ ವೇಳೆಯಲ್ಲಿ ಈ ಅವಘಡ ನಡೆದಿದೆ. ತಪ್ಪಿದ ಭಾರೀ ಅನಾಹುತ: ಕಡಲ್ಕೊರೆತ ತಡೆಗಾಗಿ ದೊಡ್ಡ ಟಿಪ್ಪರ್ ವಾಹನಗಳಲ್ಲಿ ಬಂಡೆಕಲ್ಲುಗಳನ್ನು ಸಾಗಿಸುತ್ತಿದ್ದು, ಟಿಪ್ಪರ್ ಹಿಂಬದಿಯ […]