ಅಂತರರಾಷ್ಟೀಯ ಜೀವವೈವಿಧ್ಯ ದಿನಾಚರಣೆ
![](https://udupixpress.com/wp-content/uploads/2019/05/Untitled.png)
ಬೆಂಗಳೂರು : ಕರ್ನಾಟಕ ಜೀವವೈವಿಧ್ಯ ಮಂಡಳಿಯು 2019-20ನೇ ಸಾಲಿನ ಅಂತರರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆಯನ್ನು ಮೇ:22 ರಂದು ಅರಣ್ಯ ಭವನದಲ್ಲಿ ಸಡಗರದಿಂದ ಆಚರಿಸಿತು. ಈ ವರ್ಷದ ಅಂತರ ರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆಯ ಘೋಷ ವಾಕ್ಯ “ನಮ್ಮ ಜೀವವೈವಿಧ್ಯತೆ, ನಮ್ಮ ಆಹಾರ, ನಮ್ಮ ಆರೋಗ್ಯ”. ಈ ಕಾರ್ಯಕ್ರಮದ ಕೇಂದ್ರ ಬಿಂದುವಾದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಸಾಲು ಮರದ ತಿಮ್ಮಕ್ಕ, ಅವರ ಹಾದಿಯಲ್ಲಿ ನಡೆಯುತ್ತಿರುವ ಅವರ ದತ್ತು ಮಗನಾದ ಡಾ.ಉಮೇಶ್ ಬಿ. ಎನ್, ಮುಖ್ಯ ಅತಿಥಿಗಳಾದ ಮಹೇಂದ್ರ ಜೈನ್, ಸರ್ಕಾರದ ಅಪರ […]
ಕುಂದಾಪುರ : ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದಿಂದ ದಾಳಿ
![](https://udupixpress.com/wp-content/uploads/2019/05/kundapura-raid.jpg)
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿಯಿಂದ ಕುಂದಾಪುರ ತಾಲೂಕಿನ ಬಸ್ ನಿಲ್ದಾಣ ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿಗಳು, ಹೋಟೇಲ್ಗಳು, ಬಾರ್ ಮತ್ತು ರೆಸ್ಟೋರೆಂಟ್ಗಳಿಗೆ ದಾಳಿ ನಡೆಸಿ ಸೆಕ್ಷನ್ 4, 6 (ಎ) ಮತ್ತು 6(ಬಿ) ಅಡಿಯಲ್ಲಿ 39 ಪ್ರಕರಣ ದಾಖಲಿಸಿ 4800 ರೂ. ದಂಡ ವಸೂಲಿ ಮಾಡಲಾಗಿದೆ. ಅದರಂತೆ ಸೆಕ್ಷನ್ 4, 6 (ಎ) ಮತ್ತು 6(ಬಿ) ನಾಮಫಲಕಗಳನ್ನು ಈ ದಾಳಿಯಲ್ಲಿ ವಿತರಿಸಲಾಯಿತು. ಹಾಗೂ ಎಲ್ಲಾ […]
ಉಡುಪಿ:ಎಸಿಬಿ ಯಿಂದ ಅಹವಾಲು ಸ್ವೀಕಾರ
ಉಡುಪಿ :ಉಡುಪಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿಯವರು ಮೇ 29 ರಂದು ಬೈಂದೂರು ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಮತ್ತು ಮಧ್ಯಾಹ್ನ 2.30 ರಿಂದ ಸಾಯಂಕಾಲ 4.30 ರವರೆಗೆ ಕುಂದಾಪುರ ಪ್ರವಾಸಿ ಮಂದಿರದಲ್ಲಿ ಹಾಗೂ ಮೇ 30 ರಂದು ಬೆಳಿಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕಾರ್ಕಳ ಪ್ರವಾಸಿ ಮಂದಿರದಲ್ಲಿ ಹಾಗೂ ಮಧ್ಯಾಹ್ನ 2.30 ರಿಂದ ಸಾಯಂಕಾಲ 4.30 ರವರೆಗೆ ಹೆಬ್ರಿ ಪ್ರವಾಸಿ ಮಂದಿರದಲ್ಲಿ ಮೊಕ್ಕಾಂ ಇದ್ದು, ಸಾರ್ವಜನಿಕರಿಂದ […]
ಉಡುಪಿ:ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆ
![](https://udupixpress.com/wp-content/uploads/2019/05/download-1-1.jpg)
ಉಡುಪಿ: ಕರ್ನಾಟಕ ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ವಿಚಾರಣೆ ಬಯಸುವ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದು. ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಠಿಯಿಂದ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳನ್ನು ಮೇ 27 ರಂದು ಬೆಳಿಗ್ಗೆ 11 ಗಂಟೆಯಿಂದ 12.30 ರವರೆಗೆ ಬೈಂದೂರು ಪ್ರವಾಸಿ ಮಂದಿರ, ಮೇ 28 ರಂದು ಬೆಳಿಗ್ಗೆ 11 ಗಂಟೆಯಿಂದ 12.30 ರವರೆಗೆ ಕಾಪು ತಾಲೂಕು ಕಚೇರಿ, ಮೇ 29 ರಂದು ಬೆಳಿಗ್ಗೆ 11 ಗಂಟೆಯಿಂದ 12.30 […]
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ವೃಂದದ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆ
![](https://udupixpress.com/wp-content/uploads/2019/05/download-3.jpg)
ಉಡುಪಿ : 2018-19 ನೇ ಸಾಲಿನಲ್ಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ (6 ರಿಂದ 8 ನೇ ತರಗತಿ) ವೃಂದದ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗಳು ಬಾಲಕಿಯರ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಉಡುಪಿ ಹಾಗೂ ಸರಕಾರಿ ಸಂಯುಕ್ತ ಪ್ರೌಢಶಾಲೆ, ವಳಕಾಡು ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಜಿಲ್ಲೆಗೆ ಸಂಬಂಧಿಸಿದಂತೆ ಒಟ್ಟು 371 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಪರೀಕ್ಷೆಗಳು ಮೇ 25 ರಂದು ಬೆಳಗ್ಗೆ 10.30 ರಿಂದ 1 ಗಂಟೆಯವರೆಗೆ ಹಾಗೂ ಮಧ್ಯಾಹ್ನ 2.30 ರಿಂದ 5.30 […]