ಬೆಳ್ತಂಗಡಿ: ಬಾವಿಗೆ ಬಿದ್ದ ಚಿರತೆಯ ರಕ್ಷಣೆ

ಮಂಗಳೂರು: ಆಹಾರವನ್ನರಿಸಿ ನಾಡಿಗೆ ಬಂದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನ ನಾವೂರಿನಲ್ಲಿ ಸೋಮವಾರ ರಾತ್ರಿಯ ವೇಳೆ ನಡೆದಿದೆ. ನಾವೂರು ಗ್ರಾಮದ ಗಂಗಯ್ಯ ಗೌಡ ಎಂಬುವವರ ಮನೆಯ ಬಾವಿಗೆ ರಾತ್ರಿಯ ವೇಳೆ ಚಿರತೆ ಬಿದ್ದಿದ್ದು, ಆಹಾರ ಹುಡುಕುತ್ತಾ ಬಂದ ವೇಳೆ ಆಕಸ್ಮಿಕವಾಗಿ ಬಾವಿಗೆ ಬಿದ್ದಿದೆ ಎನ್ನಲಾಗಿದೆ. ಚಿರತೆ ಬಿದ್ದ ಬಾವಿಯಲ್ಲಿ‌ ಸಾಧಾರಣ ನೀರಿದ್ದು, ಹೀಗಾಗಿ‌ ಚಿರತೆಯ ಬಾವಿಯ ಬದಿಯಲ್ಲಿ ಕುಳಿತಿತ್ತು. ಮಂಗಳವಾರ ಬೆಳಗ್ಗೆ ಚಿರತೆ ಬಿದ್ದಿರುವುದನ್ನು ಗಮನಿಸಿದ‌ ಮನೆಯವರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ […]

ಮಂಗಳೂರು: ಖಾಸಗಿ ಬಸ್ಸುಗಳ‌ ಮೇಲೆ ಪುತ್ತೂರು, ವಿಟ್ಲ, ಬಂಟ್ವಾಳದಲ್ಲಿ ಕಲ್ಲು ತೂರಾಟ

ಮಂಗಳೂರು: ಖಾಸಗಿ ಬಸ್ಸುಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ಮಂಗಳವಾರ ವಿಟ್ಲ, ಪುತ್ತೂರು, ಬಂಟ್ವಾಳ‌ ಮೊದಲಾದ ಭಾಗದಲ್ಲಿ‌ ನಡೆದಿದೆ. ಪುತ್ತೂರು ಕಡೆಗೆ ತೆರಳುವ ಸೆಲಿನಾ ಹಾಗೂ ಸೇಫ್ ವೇ ಸೇರಿದಂತೆ ಸುಮಾರು 7 ಖಾಸಗಿ ಬಸ್ ಗಳ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಘಟನೆಯಲ್ಲಿ ಬಸ್ ಗಳ ಗಾಜು ಸಂಪೂರ್ಣ ಪುಡಿಯಾಗಿದ್ದು, ಕೆಲವು‌ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಸೋಮವಾರ ಕೇರಳ ಭಾಗದ ಅಡ್ಯನಡ್ಕದಲ್ಲಿ ಗೋ ಸಾಗಾಟಗಾರರ ಮೇಲೆ ಹಲ್ಲೆ ನಡೆಸಿ ಹಣ ಹಾಗೂ ಪಿಕಪ್ […]