ಪೊಲೀಸ್ ಇಲಾಖೆ ನೇಮಕಾತಿ- ಮಾಹಿತಿ ಕಾರ್ಯಾಗಾರ
ಉಡುಪಿ, ಜೂನ್ 26: ಪೊಲೀಸ್ ಇಲಾಖೆಯ ವತಿಯಿಂದ ಜೂನ್ 27 ರಂದು ಬೆಳಗ್ಗೆ 9.30ಕ್ಕೆ ಮಲ್ಪೆ ಏಳೂರು ಮೊಗವೀರ ಸಭಾಭವನದ ಮತ್ಸ್ಯನಿಧಿ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಪಾಸಾಗಿರುವ ಕರಾವಳಿ ತೀರದ ಮೀನುಗಾರ ಯುವಕ ಹಾಗೂ ಯುವತಿಯರಿಗೆ ಪೊಲೀಸ್ ಇಲಾಖೆಗೆ ನೇಮಕಾತಿ ಕುರಿತು, ಕರ್ನಾಟಕ ಕೆ.ಎಸ್.ಆರ್.ಪಿ. ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಭಾಸ್ಕರ ರಾವ್ ಮಾಹಿತಿ ಕಾರ್ಯಾಗಾರ ನಡೆಸಲಿದ್ದಾರೆ ಎಂದು ಮಲ್ಪೆ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಮಾದಕ ವಸ್ತು ವಿರೋಧ ಮನೆಗಳಿಂದಲೇ ಪ್ರಾರಂಭವಾಗಬೇಕು: ನಳಿನಿ ಪ್ರದೀಪ್

ಉಡುಪಿ, ಜೂನ್ 26: ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಪ್ರತಿ ಮನೆ ಮನೆಗಳಿಂದ ಆರಂಭವಾಗಬೇಕು ಎಂದು ಉಡುಪಿ ತಾಲೂಕು ಪಂಚಾಯತ್ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್ ಹೇಳಿದ್ದಾರೆ. ಅವರು ಬುಧವಾರ, ಎಂಜಿಎಂ ಕಾಲೇಜಿನನ ನೂತನ ರವೀಂದ್ರ ಮಂಟಪದಲ್ಲಿ, ಜಿಲ್ಲಾಡಳಿತ ಉಡುಪಿ ಜಿಲ್ಲೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ, ಎಂ.ಜಿ.ಎಂ. ಕಾಲೇಜು ಉಡುಪಿ, ಮಹಾತ್ಮ ಗಾಂಧೀ ಸ್ಮಾರಕ ನಿಧಿ ಎಂ.ಜಿ.ಎಂ, ರಾಷ್ಟ್ರೀಯ ಸೇವಾ […]
ವಿಶ್ವ ಮಾದಕ ವಸ್ತು ವಿರೋಧಿ ಸಪ್ತಾಹ ಜಾಥಾ ಉದ್ಘಾಟನೆ

ಉಡುಪಿ, ಜೂನ್ 26: ಜಿಲ್ಲಾಡಳಿತ ಉಡುಪಿ ಜಿಲ್ಲೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ, ಎಂ.ಜಿ.ಎಂ. ಕಾಲೇಜು ಉಡುಪಿ, ಮಹಾತ್ಮ ಗಾಂಧೀ ಸ್ಮಾರಕ ನಿಧಿ ಎಂ.ಜಿ.ಎಂ, ರಾಷ್ಟ್ರೀಯ ಸೇವಾ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಮಾದಕ ವಸ್ತು ವಿರೋಧಿ ಸಪ್ತಾಹದ ಅಂಗವಾಗಿ, ಉಡುಪಿಯ ಬೋರ್ಡ್ ಹೈಸ್ಕೂಲ್ನಿಂದ ಎಂಜಿಎಂ ಕಾಲೇಜುವರೆಗೆ ನಡೆದ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಷಾ ಜೇಮ್ಸ್ ಬುಧವಾರ ಚಾಲನೆ ನೀಡಿದರು. […]