ಕರಾವಳಿಯ ಪುಣ್ಯಕ್ಷೇತ್ರಗಳಿಗೆ ನಟ‌‌ ದರ್ಶನ್‌‌ ಭೇಟಿ

ಮಂಗಳೂರು, ಜೂ. 28: ಕರಾವಳಿಯ ಪುಣ್ಯಕ್ಷೇತ್ರಗಳಿಗೆ ಶುಕ್ರವಾರ ಚಿತ್ರನಟ ದರ್ಶನ್ ಭೇಟಿ ನೀಡಿದ್ದಾರೆ.ಧರ್ಮಸ್ಥಳ, ಪುತ್ತೂರು ಮಹಾಲಿಂಗೇಶ್ವರ, ಸೌತಡ್ಕ ಗಣಪತಿ ಕ್ಷೇತ್ರಗಳಿಗೆ ಭೇಟಿ ನೀಡಿ ದರ್ಶನ ಮಾಡಿದ್ದಾರೆ.ಪುತ್ತೂರಿನ ಸ್ನೇಹಿತರ ಗೃಹ ಪ್ರವೇಶಕ್ಕೆ ಆಗಮಿಸಿದ್ದ ದರ್ಶನ್, ಗೃಹಪ್ರವೇಶದ ಬಳಿಕ ದೇವಸ್ಥಾನಗಳಿಗೆ ತೆರಳಿದರು.  

ಕುಂದಾಪುರ:ಶಿಕ್ಷಕರ ವರ್ಗಾವಣೆ ವಿರೋಧಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಕುಂದಾಪುರ: ಹೆಚ್ಚುವರಿ ಹೆಸರಿನಲ್ಲಿ ಶಿಕ್ಷಕರ ವರ್ಗಾವಣೆಗೆ ಮುಂದಾದ ಶಿಕ್ಷಣ ಇಲಾಖೆಯ ವಿರುದ್ದ ಬೈಂದೂರಿನ ಉಪ್ಪುಂದ ಸರ್ಕಾರಿ ಪ್ರೌಢ ಶಾಲಾ ೬೦೦ಕ್ಕೂ ಅಧಿಕ ವಿದ್ಯಾರ್ಥಿಗಳು ಶುಕ್ರವಾರ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಉಪ್ಪುಂದ ಸರಕಾರಿ ಪ್ರೌಢ ಶಾಲೆಯಲ್ಲಿ ಒಟ್ಟು ೬೧೨ ವಿದ್ಯಾರ್ಥಿಗಳು ವಿದ್ಯಾಭ್ಯಾಸ ನಡೆಸುತ್ತಿದ್ದು, ೧೬ ಶಿಕ್ಷಕರು ಕೆಲಸ ನಿರ್ವಹಿಸುತ್ತಿದ್ದರು. ಉಪ್ಪುಂದ ಪ್ರೌಢ ಶಾಲೆ ಗುಣಮಟ್ಟದ ಶಿಕ್ಷಣಕ್ಕೆ ಹೆಸರುವಾಸಿಯಾಗಿದ್ದು, ಈ ಬಾರಿಯ ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶವೂ ಬಂದಿತ್ತು. ಇದೀಗ ಶಿಕ್ಷಣ ಇಲಾಖೆ ಏಕಾಏಕಿಯಾಗಿ ಹೆಚ್ಚುವರಿ ಕಾರಣ ನೀಡಿ […]

ಜು.1: ಧ್ವನಿ ಬೆಳಕು ಸಂಯೋಜಕರ ಸಂಘಟನೆಯ 8ನೇ ವಾರ್ಷಿಕೋತ್ಸವ

ಉಡುಪಿ, ಜೂ.28: ಉಡುಪಿ ಜಿಲ್ಲಾ ಧ್ವನಿ ಬೆಳಕು ಸಂಯೋಜಕರ ಸಂಘಟನೆ ಬ್ರಹ್ಮಾವರ ವಲಯ ಆಶ್ರಯದಲ್ಲಿ 8ನೇ ವಾರ್ಷಿಕೋತ್ಸವ ಜುಲೈ.1ರಂದು ಬೆಳಗ್ಗೆ 9 ಗಂಟೆಗೆ ಬ್ರಹ್ಮಾವರದ ಹೋಟೆಲ್ ಆಶ್ರಯದ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಉಪಾಧ್ಯಕ್ಷ ಕೆ.ಬಾಲಕೃಷ್ಣ ಪೂಜಾರಿ ಸಾಸ್ತಾನ ಜೂ.28ರಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.  ಅಂದು ಬೆಳಗ್ಗೆ 9 ಗಂಟೆಯಿಂದ ಸಭಾ, ಸಮ್ಮಾನ ಕಾರ್ಯಕ್ರಮಗಳು ನಡೆಯಲಿದೆ. ಸಂಜೆ 4ರಿಂದ ವಿವಿಧ ಸಾಂಸ್ಕೃತಿ ಕಾರ್ಯಕ್ರಮಗಳು ನಡೆಯಲಿದೆ.  ಸಂಘಟನೆಯ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಉನ್ನತ ಶಿಕ್ಷಣಕ್ಕಾಗಿ ಧನಸಹಾಯ, ಹಿರಿಯ ಕಾರ್ಮಿಕರಿಗೆ, […]

ಉಡುಪಿ: ಕ್ರೆಡೈ ವತಿಯಿಂದ ಸಂಚಾರಿ ಪೊಲೀಸರಿಗೆ ರೈನ್ ಕೋಟ್ ವಿತರಣೆ

ಉಡುಪಿ, ಜೂ. 28: ಕ್ರೆಡೈ ವತಿಯಿಂದ ಸಿಎಸ್‌ಆರ್‌ ಯೋಜನೆಯಡಿ ಕರ್ತವ್ಯ ನಿರ್ವಹಿಸುವ ಸಂಚಾರಿ ಪೊಲೀಸರಿಗೆ ಕೊಡಮಾಡಿದ ೪೦ ರೈನ್‌ಕೋಟ್‌ಗಳ ವಿತರಣೆ ಶುಕ್ರವಾರ ಎಸ್ಪಿ ಕಚೇರಿಯಲ್ಲಿ‌ ನಡೆಯಿತು.ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಶಾ ಜೇಮ್ಸ್‌ ರೈನ್ ಕೋಟ್ ವಿತರಿಸಿ ಮಾತನಾಡಿ, ಹೆದ್ದಾರಿ ರಸ್ತೆಯಲ್ಲಿರುವ ಅನಧಿಕೃತ ಬಸ್‌ ನಿಲ್ದಾಣದಿಂದಾಗಿ ಅಪಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಈ ಬಗ್ಗೆ ಸ್ಥಳ ಪರಿಶೀಲಿಸಿ ವರದಿ ಸಲ್ಲಿಸುವಂತೆ ಡಿವೈಎಸ್ಪಿ ಅವರಿಗೆ ಸೂಚನೆ ನೀಡಲಾಗಿದೆ.ಉಡುಪಿ ಹಾಗೂ ಕುಂದಾಪುರದಲ್ಲಿ ಪ್ರಥಮವಾಗಿ ಈ ಪರಿಶೀಲನೆ ಕಾರ್ಯ ನಡೆಯಲಿದೆ.ಅಧಿಕಾರಿಗಳು ಅಧಿಕೃತ ಸ್ಥಳ ಗುರುತಿಸಿ, […]

ಕಿನ್ನಿಗೋಳಿ:ತಾಳಿಪಾಡಿ ಪ್ರಾಥಮಿಕ ನೇಕಾರರ ಸಂಘದಲ್ಲಿ ನೇಕಾರ ಆನಂದ ಶೆಟ್ಟಿಗಾರ್ ಅವರಿಗೆ ಪುರಸ್ಕಾರ ಕಾರ್ಯಕ್ರಮ

ಕಿನ್ನಿಗೋಳಿ: ಕದಿಕೆ ಟ್ರಸ್ಟ್ ವತಿಯಿಂದ ನೇಕಾರರನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮ ಜು.28 ರಂದು  ಕಿನ್ನಿಗೋಳಿಯ ನೇಕಾರ ಸಭಾಭವನದಲ್ಲಿ ನಡೆಯಿತು. 47 ವರ್ಷಗಳಿಂದ ನೇಕಾರಿಕೆಯಲ್ಲಿ ತೊಡಗಿಕೊಂಡು ಇದೀಗ  ಉಡುಪಿ ಸೀರೆಯನ್ನು ನೇಯುತ್ತಿರುವ, ಮತ್ತು ನೇಕಾರಿಕೆಯಲ್ಲಿಯೇ ಜೀವನ ಕಟ್ಟಿಕೊಂಡಿರುವ  ಆನಂದ ಶೆಟ್ಟಿಗಾರ್ ಅವರನ್ನು ಟ್ರಸ್ಟ್ ವತಿಯಿಂದ ಪುರಸ್ಕರಿಸಲಾಯಿತು. ಈ ಸಂದರ್ಭದಲ್ಲಿ  ತಾಳಿಪಾಡಿ ಪ್ರಾಥಮಿಕ ನೇಕಾರರ ಸಂಘದ ನಿರ್ದೇಶಕರಾದ ಮಾಧವ ಶೆಟ್ಟಿಗಾರ್, ಅಧ್ಯಕ್ಷರಾದ  ಆನಂದ ಶೆಟ್ಟಿಗಾರ್, ಕದಿಕೆ ಟ್ರಸ್ಟ್ ನ  ಚಿಕ್ಕಪ್ಪ ಶೆಟ್ಟಿ, ಮಮತಾ ರೈ, ಪುರುಷೋತ್ತಮ ಅಡ್ವೆ, ಹಿರಿಯ ನೇಕಾರರು, […]