ಮಂಗಳೂರು: ಪುತ್ತೂರಿನಲ್ಲಿ ನಡೆಯಿತೇ ಗ್ಯಾಂಗ್ ರೇಪ್..?

ಮಂಗಳೂರು: ಯುವತಿಗೆ ಗಾಂಜಾ ನೀಡಿ ಸಾಮೂಹಿಕ ಅತ್ಯಾಚಾರ‌ ಎಸಗಿರುವ ವಿಡಿಯೋ ತುಣುಕೊಂಡು ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡುತ್ತಿದ್ದು, ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ ಎನ್ನಲಾಗಿದೆ. ವೀಡಿಯೋ ಸಂಬಂಧಿಸಿದಂತೆ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು‌ ಕೂಡಲೇ ತನಿಖೆಗೆ ಆದೇಶಿಸಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿರುವ ವಿದ್ಯಾರ್ಥಿನಿ ಮೇಲೆ ವಿದ್ಯಾರ್ಥಿಗಳು ಅತ್ಯಾಚಾರ ನಡೆಸಿದ್ದಾರೆ. ಬಳಿಕ ವಿಡೀಯೋ ವನ್ನು ಕಿಡಿಗೇಡಿಗಳು ವೈರಲ್ ಮಾಡಿದ್ದಾರೆ ಎನ್ನಲಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ‌ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮಿಪ್ರಸಾದ್ ಅವರು ತನಿಖೆಗೆ‌ ಆದೇಶಿಸಿದ್ದಾರೆ.

ಮಂಗಳೂರು: ಜಿ.ಪಂ‌ ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಸರಕಾರಿ ವೈದ್ಯರನ್ನು ನಿಂದಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆಗೆ ಸಂಬಂಧಿಸಿ ದ.ಕ. ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸ್ ದೌರ್ಜನ್ಯಕ್ಕೆ ಒಳಗಾಗಿದ್ದ ಕುಟುಂಬವನ್ನು ನೋಡಲು ತೆರಳಿದ್ದ ಅಧ್ಯಕ್ಷೆ ಸರಕಾರಿ ಆಸ್ಪತ್ರೆ ಯಲ್ಲಿ ವೈದ್ಯರನ್ನು ನಿಂದಿಸಿದ್ದು, ಆ ವೀಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ವೈದ್ಯೆ ಡಾ.ಅರ್ಚನಾ ಅವರು ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಉದ್ಯಾವರ: ಗ್ಯಾಸ್ ತುಂಬಿದ ಬುಲೆಟ್ ಟ್ಯಾಂಕರ್ ಪಲ್ಟಿ

ಉಡುಪಿ: ಮಂಗಳೂರಿನಿಂದ ಕಾರವಾರ ಕಡೆಗೆ ತೆರಳುತ್ತಿದ್ದ ಗ್ಯಾಸ್ ತುಂಬಿದ ಬುಲೆಟ್ ಟ್ಯಾಂಕರ್ ರಸ್ತೆಬದಿ ಮಗುಚಿ ಬಿದ್ದ ಘಟನೆ ಬುಧವಾರ ಬೆಳಗ್ಗೆ 5:45 ರ ವೇಳೆಗೆ ಉದ್ಯಾವರ ಬಲಾಯಿಪಾದೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಟ್ಯಾಂಕರ್ ಚಾಲಕ ಉದ್ಯಾವರದಲ್ಲಿ ಟ್ಯಾಂಕರಿಗೆ ಡಿಸೇಲ್ ತುಂಬಿಸಿಕೊಂಡು ಮುಂದೆ ಸಾಗಿದ್ದು, ಸ್ವಲ್ಪ ದೂರ ತೆರಳುವಾಗ ಪೆಟ್ರೋಲ್ ಬಂಕ್ ನಲ್ಲಿ ಸ್ವೈಪ್ ಮಾಡಿರುವ ಎಟಿಎಂ ಕಾರ್ಡ್ ಅಲ್ಲೇ ಬಿಟ್ಟಿರುವುದು ಚಾಲಕನ ನೆನಪಿಗೆ ಬಂದಿದೆ. ಹೀಗಾಗಿ ಆತ ಬಲಾಯಿಪಾದೆಯ ಯುಟರ್ನ್ ನಲ್ಲಿ ಟ್ಯಾಂಕರನ್ನು ತಿರುಗಿಸಲು ಪ್ರಯತ್ನಿಸಿದ್ದು […]