ಸಸಿಹಿತ್ಲು: ಸಮುದ್ರಕ್ಕಿಳಿದ ಇಬ್ಬರು ಯುವಕರು ನೀರುಪಾಲು

ಮಂಗಳೂರು: ಸಮುದ್ರಕ್ಕೆ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರುಪಾಲಾದ ಘಟನೆ ಮಂಗಳೂರಿನ ಸಸಿಹಿತ್ಲು ಬೀಚ್ ನಲ್ಲಿ ಭಾನುವಾರ ಸಂಭವಿಸಿದೆ. ಸ್ನಾನಕ್ಕಿಳಿದ ವೇಳೆ ಘಟನೆ ನಡೆದಿದ್ದು, ಬಜ್ಪೆ ನಿವಾಸಿ ಸುಜಿತ್ (32), ಕಾವೂರಿನ ಗುರುಪ್ರಸಾದ್ (28) ಮೃತಪಟ್ಟಿದ್ದಾರೆ. ಇನ್ನಿಬ್ಬರು ನೀರುಪಾಲಾಗುತ್ತಿದ್ದಾಗ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಅದರಲ್ಲಿ ಒರ್ವನ ಸ್ಥಿತಿ ಗಂಭೀರವಾಗಿದೆ. ಸಮೀಪದಲ್ಲಿ ಆಯೋಜಿಸಿದ ‘ಕೆಸರ್ಡೊಂಜಿ ದಿನ’ ಕಾರ್ಯಕ್ರಮದ ಬಳಿಕ ಯುವಕರು ಸ್ನಾನಕ್ಕೆಂದು ಸಮುದ್ರಕ್ಕೆ ತೆರಳಿದ್ದರು. ಮೂಲ್ಕಿ ಠಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಿಜೆಪಿ ಸರ್ಕಾರ ಮಾಡಿದರೆ ನಮ್ಮ ಅಭ್ಯಂತರವಿಲ್ಲ: ರೋಶನ್ ಬೇಗ್

ಬೆಂಗಳೂರು ಜು. 07:  ಬಿಜೆಪಿ ಸರ್ಕಾರ ರಚನೆ ಮಾಡಿದರೆ ನಮ್ಮ ಅಭ್ಯಂತರವಿಲ್ಲ. ನಮ್ಮ ಆಂತರಿಕ ಕಚ್ಚಾಟದಿಂದ ಹೀಗಾಗಿದೆ. ಎಂದು ಕಾಂಗ್ರೆಸ್ ಅಮಾನತು ಶಾಸಕ ರೋಶನ್ ಬೇಗ್ ಹೇಳಿದ್ದಾರೆ. ನಾನು ರಾಜೀನಾಮೆ ಕೊಡೋದಾದ್ರೆ ಹೇಳಿಯೇ ಕೊಡ್ತೀನಿ. ನನಗೆ ಅಸಮಾಧಾನ ಇರೋದು ನಿಜ. ರಾಮಲಿಂಗಾರೆಡ್ಡಿ ಅವರಿಗೇ ಪಕ್ಷದಲ್ಲಿ ಸ್ಥಾನ ಮಾನ ಇಲ್ಲ. ಇದಕ್ಕೆಲ್ಲ ಕಾರಣ ನಾನು ಅಂದು ಪ್ರಸ್ತಾಪ ಮಾಡಿದ್ದ ಹೆಸರುಗಳೇ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಮೇಲೆ ವಾಗ್ದಾಳಿ ಮಾಡಿದರು. ನಾನು ಅವತ್ತು ಸಿದ್ದರಾಮಯ್ಯ ವಿರುದ್ಧ ಮಾತಾಡಿದೆ ಅಂತ ಸಸ್ಪೆಂಡ್ […]

ಉಡುಪಿ: ರಾಷ್ಟ್ರಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆ ಸಮಾರೋಪ

ಉಡುಪಿ: ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ವತಿಯಿಂದ ಬ್ಯಾಂಕ್ ಆಫ್ ಬರೋಡ ಸಹ ಪ್ರಾಯೋಜಕತ್ವದಲ್ಲಿ 13 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರಿಗೆ ಮಣಿಪಾಲದ ಮರಿನಾ ಒಳಾಂಗಣ ಕ್ರೀಡಾಂಗಣ ಮತ್ತು ಅಜ್ಜರಕಾಡು ಒಳಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಭಾರತ ಸಬ್ ಜ್ಯೂನಿಯರ್ ರ‍್ಯಾಂಕಿಂಗ್  ರಾಷ್ಟ್ರೀಯ ಬ್ಯಾಡ್ಮಿಂಟನ್ ಟೂರ್ನಮೆಂಟ್ ನ ಸಮಾರೋಪ‌ ಸಮಾರಂಭ ಭಾನುವಾರ ನಡೆಯಿತು. ವಿಜೇತರ ಪಟ್ಟಿ ಹೀಗಿದೆ: 13 ವರ್ಷ ಬಾಲಕರ ವಿಭಾಗ-ಅನ್ಶ್ ನೇಗಿ (ಉತ್ತರಾಖಂಡ್), ಬಾಲಕಿಯರ ವಿಭಾಗ- ಉನ್ನತಿ ಹೂಡಾ (ಹರ್ಯಾಣ), 13 ವರ್ಷ ಬಾಲಕರ ಡಬಲ್ಸ್-  ವನ್ಶ್ ಪ್ರತಾಪ್ […]

ಶ್ರೀ ಕೃಷ್ಣ ಮಠದಲ್ಲಿ ಭರತನಾಟ್ಯ ಕಾರ್ಯಕ್ರಮ

ಉಡುಪಿ: ಶ್ರೀ ಕೃಷ್ಣ ಮಠದ ಮಧ್ವ ಮಂಟಪದಲ್ಲಿ ,ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಬೆಂಗಳೂರಿನ ಭಾವನ ಭಾಗವತ್ ಇವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು.  

ಚಂದ್ರಯಾನ ‌ಯಶಸ್ಸಿಗೆ ಇಸ್ರೋ ದಿಂದ‌ ಉಡುಪಿ ಶ್ರೀಕೃಷ್ಣ ಮಠದಲ್ಲಿ ಪ್ರಾರ್ಥನೆ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಇಸ್ರೋದ ಅಧ್ಯಕ್ಷ ಕೆ.ಶಿವನ್ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದು, ಜು 15ರಂದುನಡೆಯಲಿರುವ ಚಂದ್ರಯಾನಕ್ಕೆ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿ ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪರ್ಯಾಯ ಮಠದ ಪಿ.ಆರ್.ಓ ಶ್ರೀಶ ಭಟ್ ಕಡೆಕಾರ್ ಉಪಸ್ಥಿತರಿದ್ದರು.